ದಾದ್ರಿ ಹತ್ಯೆ ಪ್ರಕರಣವನ್ನು ಖಂಡಿಸಿ ದೇಶದ ಅನೇಕ ಸಾಹಿತಿಗಳು ತಾವು ಪಡೆದಿರುವಂತಹ ಸಾಹಿತ್ಯ ಪ್ರಶಸ್ತಿಗಳು ಹಿಂದಿರುಗಿಸುತ್ತಿದ್ದಾರೆ. ಸಾಹಿತಿಗಳ ಈ ಕ್ರಮದ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಯಿಸಿರುವ ವಿಎಚ್ ಪಿ ಮುಖಂಡ ಸುರೇಂದ್ರ ಜೈನ್, ಸೌದಿಯಲ್ಲಿ ಸಾಹಿತಿಗಳು ಹಂದಿ ಕೇಳಿ ಬದುಕುಳಿದರೆ, ಅವರು ಪ್ರಶಸ್ತಿಯನ್ನು ಹಿಂದಿರುಗಿಸುತ್ತಿರುವುದನ್ನು ಸ್ವಾಗತಿಸುತ್ತೇನೆ. ದೇಶದ 2/3 ಷ್ಟು ಜನರು ಮಾಂಸಾಹಾರಿಗಳಾಗಿದ್ದಾರೆ ಎಂದು ನಮಗೆ ತಿಳಿದಿದೆ. ನಾವು ಯಾರದೇ ಆಹಾರ ಪದ್ಧತಿಯನ್ನು ಬದಲಾಯಿಸಬಯಸುವುದಿಲ್ಲ ಆದರೆ, ಹಿಂದೂಗಳಿಗೆ ತಾಯಿ ಸಮಾನವಾದ ಗೋವನ್ನು ಹತ್ಯೆ ಮಾಡುವುದನ್ನು ನಿಷೇಧಿಸಬೇಕು ಎಂದು ಹೇಳಿದ್ದಾರೆ.