ಗುಜರಾತ್ ನರಮೇಧಕ್ಕೆ ಸಂಬಂಧಿಸಿ, ತಾನು ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ದಾಖಲಿಸಿರುವ ಪ್ರಕರಣದಲ್ಲಿ ಬಿಜೆಪಿ ಮುಖಂಡ ಅಮಿತ್ ಶಾರನ್ನೂ ಪಕ್ಷಗಾರರನ್ನಾಗಿಸಬೇಕು. ಅಲ್ಲದೇ, ಮಾಜಿ ಕಾಂಗ್ರೆಸ್ ಸಂಸದ ಎಹ್ಸಾನ್ ಜಾಫ್ರಿ ಹತ್ಯೆ ಪ್ರಕರಣ, ಸೊಹ್ರಾಬುದ್ದೀನ್ ಮತ್ತು ಇಶ್ರತ್ ಜಹಾನ್ ಎನ್ ಕೌಂಟರ್ ಪ್ರಕರಣಗಳಲ್ಲಿ ಮೋದಿಯವರ ಆಪ್ತ ಅಮಿತ್ ಶಾ ಪಾತ್ರವಿದೆ. ಹಾಗಾಗಿ, ಈ ಬಗ್ಗೆ ಎಸ್ ಐಟಿ ತನಿಖೆಗೆ ಆದೇಶಿಸಬೇಕು ಎಂದು ಎಂದು ಮನವಿ ಮಾಡಿದ್ದರು.