ಸಾಹಿತಿಗಳಿಂದ ಪ್ರಶಸ್ತಿ ವಾಪಸ್ ರಾಜಕೀಯ ಪ್ರೇರಿತ: ಅನುಪಮ್ ಖೇರ್

ಬರಹಗಾರರ ಮೇಲೆ ನಡೆಯುತ್ತಿರುವ ದಾಳಿಯನ್ನು ಖಂಡಿಸಿ ಅಕಾಡೆಮಿ ಪ್ರಶಸ್ತಿಗಳನ್ನು ಹಿಂದಿರುಗಿಸುತ್ತಿರುವ ಸಾಹಿತಿಗಳ ವಿರುದ್ಧ ವಾಗ್ದಾಳಿ ನಡೆಸಿರುವ...
ಅನುಪಮ್ ಖೇರ್
ಅನುಪಮ್ ಖೇರ್

ಮುಂಬೈ: ಬರಹಗಾರರ ಮೇಲೆ ನಡೆಯುತ್ತಿರುವ ದಾಳಿಯನ್ನು ಖಂಡಿಸಿ ಅಕಾಡೆಮಿ ಪ್ರಶಸ್ತಿಗಳನ್ನು ಹಿಂದಿರುಗಿಸುತ್ತಿರುವ ಸಾಹಿತಿಗಳ ವಿರುದ್ಧ ವಾಗ್ದಾಳಿ ನಡೆಸಿರುವ ಬಾಲಿವುಡ್ ಹಿರಿಯ ನಟ ಅನುಪಮ್ ಖೇರ್ ಅವರು, ಇದೊಂದು ರಾಜಕೀಯ ಪ್ರೇರಿತ ಮತ್ತು ಪ್ರಧಾನಿ ನರೇಂದ್ರ ಮೋದಿಗೆ ಕೆಟ್ಟ ಹೆಸರು ತರುವ ಉದ್ದೇಶ ಅಷ್ಟೇ ಎಂದಿದ್ದಾರೆ.

'ಇದೊಂದು ರಾಜಕೀಯ ಪ್ರೇರಿತ ಅನಿಸುತ್ತಿದೆ. ಭಾರತದಲ್ಲಿ ಹಿಂಸಾತ್ಮಕ ಘಟನೆಗಳು ನಡೆಯುತ್ತಿರುವುದು ಇದೇ ಮೊದಲೇನಲ್ಲ' ಎಂದು ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

'ಪ್ರಧಾನಿ ಮೋದಿ ಅವರಿಗೆ ಕೆಟ್ಟ ಹೆಸರು ತರುವ ಉದ್ದೇಶದಿಂದ ಈ ರೀತಿ ಮಾಡಲಾಗುತ್ತಿದೆ. ಒಂದು ವೇಳೆ ಅವರಿಗೆ ಪ್ರಶಸ್ತಿ ಹಿಂದಿರುಗಿಸುವುದಾದರೆ, ಎಲ್ಲವನ್ನೂ ಏಕೆ ಹಿಂದಿರುಗಿಸಬಾರದು?' ಎಂದು ಪ್ರಶ್ನಿಸಿದ್ದಾರೆ.

ಸಾಹಿತಿಗಳ ಮೇಲಿನ ದಾಳಿಯನ್ನು ಖಂಡಿಸಿ ನಯಂತಾರ ಸೆಹಗಲ್, ಸಾರಾ ಜೋಸೆಫ್, ಉದಯ್ ಪ್ರಕಾಶ್, ಅಶೋಕ್ ವಾಜಪೇಯಿ ಹಾಗೂ ಅರವಿಂದ್ ಮಾಲಗತ್ತಿ ಸೇರಿದಂತೆ ಹಲವು ಲೇಖಕರು ತಮ್ಮ ಅಕಾಡೆಮಿ ಪ್ರಶಸ್ತಿಗಳನ್ನು ಹಿಂದಿರುಗಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com