ದೂರು ನೀಡಿದರೂ ಕ್ರಮ ಜರುಗಿಸದ ಪೊಲೀಸರು: ಶಾಲಾ ಬಾಲಕಿ ಆತ್ಮಹತ್ಯೆ

ದೂರು ನೀಡಿದರೂ ಪೊಲೀಸರು ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ 11 ನೇ ತರಗತಿ ಶಾಲಾ ವಿದ್ಯಾರ್ಥಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೋಯ್ಡಾದಲ್ಲಿ ನಡೆದಿದೆ. ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ನೋಯ್ಡಾ: ನೆರೆಮನೆಯಾತ ನೀಡುತ್ತಿದ್ದ ಕಿರುಕುಳ ವಿರುದ್ದ ಕ್ರಮ ತೆಗೆದುಕೊಳ್ಳುವಂತೆ ದೂರು ನೀಡಿದರೂ ಪೊಲೀಸರು ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ 11 ನೇ ತರಗತಿ ಶಾಲಾ ವಿದ್ಯಾರ್ಥಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೋಯ್ಡಾದಲ್ಲಿ  ನಡೆದಿದೆ.

ದೆಹಲಿ ಹೊರವಲಯದಲ್ಲಿರುವ ನೋಯ್ಡಾ ಸೆಕ್ಟರ್ 63 ಯ ಛಾಜಾರ್ಸಿ ಎಂಬ ಗ್ರಾಮದ ಬಾಲಕಿಗೆ ಪಕ್ಕದ ಮನೆಯ ಕಿರುಕುಳ ನೀಡುತ್ತಿದ್ದ. ಜೊತೆಗೆ ಕಿಡ್ನಾಪ್ ಮಾಡುವುದಾಗಿ ಬೇರೆಡೆ ಕರೆದುಕೊಂಡು ಹೋಗುವುದಾಗಿ ಬೆದರಿಕೆ ಹಾಕುತ್ತಿದ್ದ. ಈ ಸಂಬಂಧ ತಾವು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದೆವು. ಆದರೆ ಪೊಲೀಸರು ಈ ಸಂಬಂಧ ಯಾವುದೇ ಕ್ರಮ ಜರುಗಿಸಲಿಲ್ಲ. ಮತ್ತೆ ಆತನಿಂದ ಬೆದರಿಕೆ ಬಂದಿದ್ದರಿಂದ ನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಬಾಲಕಿ ಡೆಟ್ ನೋಟ್ ಬರೆದಿಟ್ಟಿದ್ದಾಳೆ.

 ತಾವು ದೂರು ನೀಡಿದ್ದು ಪೊಲೀಸರು ಯಾವುದೇ ಕ್ರಮ ಜರುಗಿಸದ ಹಿನ್ನೆಲೆಯಲ್ಲಿ ತಮ್ಮ ಮಗಳು ಸಾವಿಗೆ ಶರಣಾಗಿದ್ದಾಗಿ ಮೃತ ಬಾಲಕಿ ತಂದೆ ಆರೋಪಿಸಿದ್ದಾರೆ.

ಇನ್ನು ಈ ಸಂಬಂಧ ಪ್ರತಿಕ್ರಿಯಿಸಿರುವ ನೋಯ್ಡಾ ಎಸ್ ಪಿ ದಿನೇಶ್ ಯಾದವ್, ಬಾಲಕಿ ಆತ್ಮಹತ್ಯೆಯಲ್ಲಿ ಸ್ಥಳೀಯ ಪೊಲೀಸರ ನಿರ್ಲಕ್ಷ್ಯವಿದ್ದರೇ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com