ಅಕ್ಟೋಬರ್ 15ರಂದು ತಮ್ಮ ಮೋಹಿತ್(8) ಜತೆಗೂಡಿ ಮೃತ ಆಕಾಶ್ ಜಾನುವಾರಿಗೆ ಮೇವು ತರಲು ಸಮೀಪದ ಕಾಡಿಗೆ ತೆರಳಿದ್ದಾಗ ಇಬ್ಬರು ಈತನಿಗೆ ಥಳಿಸಿದ್ದಾರೆ. ಆಗ ಆಕಾಶ್ ಪ್ರತಿರೋಧ ತೋರಿದಾಗ ಆತನನ್ನು ಕುದುರೆಗೆ ಕಟ್ಟಿ ಕಾಡುಮೇಡಿನಲ್ಲಿ ಸುಮಾರು 20 ನಿಮಿಷಗಳ ಕಾಲ ಎಳೆದಿದ್ದಾರೆ. ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ಆಕಾಶ್ ನನ್ನು ಸ್ಥಳೀಯ ಆಸ್ಪತ್ರಗೆ ಸೇರಿಸಿದರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ.