ಸಿಎನ್ಎನ್ ಐಬಿಎನ್ಗೆ ನೀಡಿದ ಸಂದರ್ಶನದಲ್ಲಿ ಬಿಜೆಪಿ ಹಾಗೂ ಪ್ರಧಾನಿ ವಿರುದ್ಧ ಕಿಡಿಕಾರಿರುವ ನಿತೀಶ್, ಬಿಜೆಪಿಯ ಅಸಹಿಷ್ಣುತೆಯ ನೈಜ ಮುಖ ಈಗ ಬಯಲಾಗುತ್ತಿದೆ ಎಂದಿದ್ದಾರೆ. ಬಿಹಾರ ಚುನಾವಣೆ ಬಗ್ಗೆ ಮಾತನಾಡಿದ ಅವರು, 2014ರ ಲೋಕಸಭೆ ಚುನಾವಣೆಯ ಫಲಿತಾಂಶವು ಮೋದಿ ಅವರ ಪರವಾಗಿ ಬಂದಿರಬಹುದು. ಆದರೆ, ಈ ಚುನಾವಣೆಯು ನಾನು ಸಿಎಂ ಆಗಿ ಬಿಹಾರಕ್ಕೆ ಏನು ಕೊಡುಗೆ ನೀಡಿದ್ದೇನೆ ಎನ್ನುವುದರ ಮೇಲೆ ನಿಂತಿದೆ.