ದಲಿತ ದಂಪತಿಗಳು ತಮ್ಮ ಇಬ್ಬರು ಮಕ್ಕಳೊಂದಿಗೆ ಗುಡಿಸಲಿನಲ್ಲಿ ಮಲಗಿದ್ದ ಸಮಯದಲ್ಲಿ ಮೇಲು ಜಾತಿಗೆ ಒಳಪಟ್ಟ ಗುಂಪೊಂದು ಗುಡಿಸಲಿಗೆ ಬೆಂಕಿ ಹಚ್ಚಿದ್ದಾರೆ. ಈ ವೇಳೆ ಮಕ್ಕಳಿಬ್ಬರು ಮೃತಪಟ್ಟಿದ್ದು, ಗಾಯಗೊಂಡ ಪೋಷಕರು ಚಿಕಿತ್ಸೆ ಪಡೆಯುತ್ತಿದ್ದಾರೆ. ಜೀತೇಂದ್ರ ಎಂಬುವವರ ಗುಡಿಸಲಿಗೆ ಬೆಂಕಿ ಹಚ್ಚಿಲಾಗಿತ್ತು. ಜೀತೇಂದ್ರ ಪತ್ನಿಗೆ ಶೇ.70ರಷ್ಟು ಸುಟ್ಟು ಹೋಗಿದ್ದು, ದೆಹಲಿಯ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಂದೂವರೆ ವರ್ಷದ ಪುತ್ರ ವೈಭವ್ ಹಾಗೂ 11 ತಿಂಗಳ ಪುತ್ರಿ ದಿವ್ಯ ಸಾವನ್ನಪ್ಪಿದ್ದರು.