ಖುರಾನ್ ಅಪವಿತ್ರ ಆರೋಪ: ಜಮ್ಮು ಉದ್ವಿಗ್ನ
ಜಮ್ಮು: ಮುಸ್ಲಿಮರ ಪವಿತ್ರ ಗ್ರಂಥ ಖುರಾನ್ ಅನ್ನು ಅಪವಿತ್ರಗೊಳಿಸಿದ್ದಾರೆ ಎಂದು ಆರೋಪಿಸಿ ಕೆಲ ಗುಂಪುಗಳು ಗಲಾಟೆ ಆರಂಭಿಸಿದ ಕಾರಣ ಜಮ್ಮು ನಗರ ಉದ್ವಿಗ್ನಗೊಂಡಿದ್ದು, ಶುಕ್ರವಾರ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಜಮ್ಮುವಿನ ಹಿಲ್ಲಿ ಭದೇರ್ವ್ಹಾ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದ್ದು, ಕಿಶ್ವಾರ್ ಪ್ರಾಂತ್ಯ ಬಹುತೇಕ ಸ್ಥಬ್ಧಗೊಂಡಿದೆ. ಶಾಲಾ-ಕಾಲೇಜು, ಅಂಗಡಿ ಮುಂಗಟ್ಟುಗಳು, ಪ್ರಮುಖ ಮಾರಾಟ ಪ್ರದೇಶಗಳು ಮತ್ತು ಮಾರುಕಟ್ಟೆಗಳನ್ನು ಮುಚ್ಚಲಾಗಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ.
ಜಮ್ಮುವಿನಲ್ಲಿ ಗುರುವಾರ ನಡೆದ ದಸರಾ ಆಚರಣೆ ವೇಳೆ ಕೆಲ ದುಷ್ಕರ್ಮಿಗಳು ಪವಿತ್ರ ಖುರಾನ್ ಗ್ರಂಥವನ್ನು ಸುಟ್ಟುಹಾಕಿದ್ದಾರೆ ಎಂದು ಹೇಳಲಾಗುತ್ತಿತ್ತು. ಈ ಹಿನ್ನಲೆಯಲ್ಲಿ ಜಮ್ಮುವಿನಲ್ಲಿ ಇಂದು ಕೋಮುಗಲಭೆ ಉಂಟಾಗಿದ್ದು, ನಗರ ಉದ್ವಿಗ್ನಗೊಂಡಿದೆ. ಘಟನೆಯನ್ನು ಖಂಡಿಸಿ ಕೆಲ ಮುಸ್ಲಿಂ ಯುವಕರು ಜಮ್ಮು ನಗರದಹೀಗಾಗಿ ನಗರದಲ್ಲಿ ನಿಷೇಧಾಜ್ಞೆ ಹೇರಲಾಗಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ.
ಪ್ರಸ್ತುತ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಹಿರಿಯ ಅಧಿಕಾರಿಗಳು ಹೇಳಿದ್ದಾರೆ.