ನೀರು ದೋಷಪೂರಿತವಾಗಿರುವುದರ ಬಗ್ಗೆ ಕಲ್ಲಕುರಿಚಿ ಆರ್ಡಿ ಒ ಅವರ ಬಗ್ಗೆ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕಾ ಪ್ರತಿನಿಧಿಗಳು ವಿಚಾರಿಸಿದಾಗ ನನಗೆ ಈ ಬಗ್ಗೆ ಏನೂ ಗೊತ್ತಿಲ್ಲ ಅಂದಿದ್ದಾರೆ. ಆದರೆ ತಾವು ಈ ಬಗ್ಗೆ ಸುಮಾರು 200ಕ್ಕಿಂತಲೂ ಹೆಚ್ಚು ಬಾರಿ ದೂರು ಸಲ್ಲಿಸಿದ್ದೇವೆ. ಆರ್ಡಿಒ, ಬಿಡಿಒ ಮತ್ತು ಜಿಲ್ಲಾಧಿಕಾರಿಗಳು ಈವರೆಗೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಊರಿನ ಜನರು ಹೇಳುತ್ತಿದ್ದಾರೆ.,