ಪ್ರತಿಭಟನೆ ನಡೆಸುತ್ತಿರುವ ಗುಂಪು ಸರ್ಕಾರಿ ಹಾಗೂ ಖಾಸಗಿ ಸೊತ್ತುಗಳಿಗೆ ಹಾನಿಯುಂಟು ಮಾಡಿದ್ದು, ನಗರದಲ್ಲಿ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ ಎಂದ ಅವರು, ಶುಕ್ರವಾರ ರಾತ್ರಿ ಧಾರ್ಮಿಕ ಪೋಸ್ಟರ್ ಒಂದನ್ನು ಹರಿದು ಹಾಕಲಾಗಿತ್ತು ಎಂದು ಆರೋಪಿಸಿ ಸಮುದಾಯದ ಜನರು ಪ್ರತಿಭಟನೆ ನಡೆಸಿದರು. ಸಂಜೆ ವೇಳೆಗೆ ಪರಿಸ್ಥಿತಿ ತೀವ್ರಗೊಂಡು ಹಿಂಸಾಚಾರಕ್ಕೆ ತಿರುಗಿತು. ಇಟ್ಟಿಗೆ, ಬ್ಯಾಟ್ ಮತ್ತಿತರ ವಸ್ತುಗಳಿಂದ ಹಲ್ಲೆ ಮಾಡಲು ಯತ್ನಿಸಿದ್ದಾರೆ. ಕೆಲವೆಡೆ ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ.