ಭೂಕುಸಿತ:ಜಮ್ಮು-ಕಾಶ್ಮೀರ ರಾಷ್ಟ್ರೀಯ ಹೆದ್ದಾರಿ ಸ್ಥಗಿತ

ಜಮ್ಮು ಪ್ರದೇಶದ ರಂಬಾನ್ ಜಿಲ್ಲೆಯಲ್ಲಿ ಭೂಕುಸಿತ ಉಂಟಾಗಿದ್ದು ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ನಂ.1 ಸ್ಥಗಿತಗೊಂಡಿದೆ.
ಜಮ್ಮು
ಜಮ್ಮು
Updated on

ಜಮ್ಮು: ಜಮ್ಮು ಪ್ರದೇಶದ ರಂಬಾನ್ ಜಿಲ್ಲೆಯಲ್ಲಿ ಭೂಕುಸಿತ ಉಂಟಾಗಿದ್ದು ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಸ್ಥಗಿತಗೊಂಡಿದೆ.
ಭಾನುವಾರ ರಾತ್ರಿಯಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಭೂಕುಸಿತ ಉಂಟಾಗಿದ್ದು ರಾಷ್ಟ್ರೀಯ ಹೆದ್ದಾರಿಯನ್ನು ನಿರ್ವಹಿಸುವ ಗಡಿ ರಸ್ತೆ ಸಂಸ್ಥೆ(ಬಿ.ಆರ್.ಒ) ಭೂಕುಸಿತವನ್ನು ತೆರವುಗೊಳಿಸುತ್ತಿದೆ ಎಂದು ಸಂಚಾರ ಇಲಾಖೆ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಜಮ್ಮು- ಶ್ರೀನಗರ ಹೆದ್ದಾರಿಯಲ್ಲಿ ಸಂಚರಿಸುವವರು ಮೊದಲು ಸಂಚಾರ ನಿಯಂತ್ರಣಕ್ಕೆ ಸಂಬಂಧಿಸಿದ ಕಚೇರಿಗಳನ್ನು ಸಂಪರ್ಕಿಸಿ ಪರಿಸ್ಥಿತಿಯ ಬಗ್ಗೆ ತಿಳಿದು ನಂತರ ಸಂಚರಿಸುವುದು ಒಳಿತು ಎಂದು ಅಧಿಕಾರಿಗಳು ಹೇಳಿದ್ದಾರೆ.
ಕಳೆದ ಎರಡು ದಿನಗಳ ಹಿಂದೆ ಹಿಮಪಾತದಿಂದ ಶ್ರೀನಗರ- ಲೇಹ್ ರಾಷ್ಟ್ರೀಯ ಹೆದ್ದಾರಿಯ ಜೋಜಿಲ್ಲ ಪಾಸ್ ಸ್ಥಗಿತಂಡಿತ್ತು. ಸ್ಥಗಿತಗೊಂಡಿರುವ ಹೆದ್ದಾರಿ ಕಾಶ್ಮೀರ ಕಣಿವೆಗೆ ಲಡಾಕ್ ನೊಂದಿಗೆ ಸಂಪರ್ಕ ಕಲ್ಪಿಸುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com