ಅಮಾನತುಗೊಂಡವರಲ್ಲಿ ಐವರು ಕ್ಯಾಬಿನೆಟ್ ಸಚಿವರಾಗಿದ್ದರು, ಇನ್ನು ಮೂವರು ರಾಜ್ಯ ಖಾತೆ ಸಚಿವರಾಗಿದ್ದರು. ಮತ್ತೆ 14 ಮಂದಿ ಹೊಸಬರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುವ ಚಿಂತನೆ ನಡೆಸಲಾಗಿದ್ದು, ಈ ಸಂಬಂಧ ಇಂದು ಬೆಳಿಗ್ಗೆ ರಾಜ್ಯಪಾಲ ರಾಮ್ ನಾಯ್ಕ್ ಅವರನ್ನು ಭೇಟಿ ಮಾಡಿದ ಅಖಿಲೇಶ್ ಯಾದವ್ ಮಾತುಕತೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.