ಕಲ್ಲಿದ್ದಲು ಹಗರಣ ಬಗ್ಗೆ ಮನಮೋಹನ್ ಸಿಂಗ್ ಗೆ ಎಲ್ಲವೂ ತಿಳಿದಿತ್ತು; ಮಧುಕೋಡ

ಬಹುಕೋಟಿ ಕಲ್ಲಿದ್ದಲು ಹಗರಣ ಕುರಿತಂತೆ ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಎಲ್ಲವೂ ತಿಳಿದಿತ್ತು ಎಂದು ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಮಧುಕೋಡ ಅವರು ಬುಧವಾರ ಹೇಳಿದ್ದಾರೆ...
ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ (ಸಂಗ್ರಹ ಚಿತ್ರ)
ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ (ಸಂಗ್ರಹ ಚಿತ್ರ)

ನವದೆಹಲಿ: ಬಹುಕೋಟಿ ಕಲ್ಲಿದ್ದಲು ಹಗರಣ ಕುರಿತಂತೆ ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಎಲ್ಲವೂ ತಿಳಿದಿತ್ತು ಎಂದು ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಮಧುಕೋಡ ಅವರು ಬುಧವಾರ ಹೇಳಿದ್ದಾರೆ.

ಈ ಕುರಿತಂತೆ ನಿನ್ನೆ ವಿಶೇಷ ನ್ಯಾಯಾಲಯದಲ್ಲಿ ಹೇಳಿಕೆ ನೀಡಿರುವ ಅವರು, ಹಗರಣ ನಡೆದ ಸಂದರ್ಭದಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರೇ ಕಲ್ಲಿದ್ದಲು ಸಚಿವರಾಗಿದ್ದರು. ಜಾರ್ಖಂಡಿನಲ್ಲಿ ಅಮರ ಖಂಡ ಮುರ್ಗಂದಗಲ್ ಕಲ್ಲಿದ್ದಲು ನಿಕ್ಷೇಪ ಹಂಚಿಕೆಯಲ್ಲಿ ಹಗರಣ ನಡೆದಿರುವುದೇ ಸತ್ಯವಾದರೆ, ಈ ಹಗರಣ ಮನಮೋಹನ್ ಸಿಂಗ್ ಅವರಿಗೆ ತಿಳಿಯದೇ ನಡೆದಿರುವುದಕ್ಕೆ ಸಾಧ್ಯವೇ ಇಲ್ಲ. ಹಾಗಾಗಿ ಮನಮೋಹನ್ ಸಿಂಗ್ ಅವರನ್ನು ವಿಚಾರಣಗೊಳಪಡಿಸಬೇಕೆಂದು ಹೇಳಿಕೊಂಡಿದ್ದಾರೆ.

ಅಂದು ಕಲ್ಲಿದ್ದಲು ಸಚಿವರಾಗಿದ್ದ ಮನಮೋಹನ್ ಸಿಂಗ್ ಅವರಿಗೆ ಹಗರಣ ಬಗ್ಗೆ ಎಲ್ಲಾ ಮಾಹಿತಿ ತಿಳಿದಿದ್ದು, ಸಿಬಿಐ ಹೇಳಿರುವಂತೆ ಅಕ್ರ ನಡೆದಿದ್ದೇ ಆದರೆ, ಅದು ಕಲ್ಲಿದ್ದಲು ಸಚಿವರ ಅರಿವಿಗೆ ಬರದೆ ಸಂಪೂರ್ಣಗೊಳ್ಳಲು ಸಾಧ್ಯವಿಲ್ಲ ಎಂದು ಮಧುಕೋಡಾ ಸಿಬಿಐ ವಿಶೇಷ ನ್ಯಾಯಾಲಯದ ಮುಂದೆ ಹೇಳಿದ್ದಾರೆ.

ಕಲ್ಲಿದ್ದಲು ಹಗರಣ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಸಿಬಿಐ ಅಧಿಕಾರಿಗಳು ಕಾಂಗ್ರೆಸ್ ಮುಖಂಡ, ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಮಧುಕೋಡ, ಉದ್ಯಮಿ ನವೀನ್ ಜಿಂದಾಲ್ ಹಾಗೂ ಇತರೆ 13 ಮಂದಿಯ ವಿರುದ್ಧ ವಿಶೇಷ ನ್ಯಾಯಾಲಯದಲ್ಲಿ ಆರೋಪ ಪಟ್ಟಿ ಸಲ್ಲಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com