ಮಾಲೇಗಾಂವ್ ಸ್ಫೋಟ ಪ್ರಕರಣ ವಿಚಾರಣೆ: ಹಿಂದೆ ಸರಿದ ನ್ಯಾಯಮೂರ್ತಿ

ಮಾಲೇಗಾಂವ್ ಸ್ಫೋಟ ಪ್ರಕರಣದ ವಿಶೇಷ ಸರ್ಕಾರಿ ವಕೀಲರನ್ನು ತೆಗೆದುಹಾಕುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ...
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್
Updated on

ನವದೆಹಲಿ: ಮಾಲೇಗಾಂವ್ ಸ್ಫೋಟ ಪ್ರಕರಣದ ವಿಶೇಷ ಸರ್ಕಾರಿ ವಕೀಲರನ್ನು ತೆಗೆದುಹಾಕುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಯಿಂದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯೇ ಹಿಂದೆ ಸರಿದಿದ್ದಾರೆ.

ತಾವು ಈ ಹಿಂದೆ ಇದೇ ಪ್ರಕರಣದ ಕೆಲವು ಆರೋಪಿಗಳನ್ನು ಪ್ರತಿನಿಧಿಸಿದ್ದ ಕಾರಣ ಈ ಅರ್ಜಿಯ ವಿಚಾರಣೆಯಿಂದ ಹಿಂದೆ ಸರಿಯುತ್ತಿದ್ದೇನೆ ಎಂದು ನ್ಯಾ.ಯು.ಯು.ಲಲಿತ್ ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಪೀಠ, `ಹಾಗಾದರೆ ಈ ಪ್ರಕರಣವನ್ನು ಮುಖ್ಯ ನ್ಯಾಯಮೂರ್ತಿಗಳ ಮುಂದೆ ಇಡೋಣ. ಅವರು ಇನ್ನೊಂದು ಪೀಠ ರಚಿಸಲಿ' ಎಂದಿದೆ. ಮಾಲೇ ಗಾಂವ್ ಆರೋಪಿಗಳ ಬಗ್ಗೆ ಮೆದು ಧೋರಣೆ ತಾಳುವಂತೆ ಎನ್‍ಐಎ ಸೂಚಿಸಿದೆ ಎಂದು ಪಬ್ಲಿಕ್ ಪ್ರಾಸಿಕ್ಯೂಟರ್ ರೋಹಿಣಿ ಆರೋಪಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com