ಕೇಂದ್ರದಿಂದ ಶ್ರೀಕೃಷ್ಣ, ಶ್ರೀರಾಮ ಸಕ್ರ್ಯೂಟ್: ಅನಂತ ಕುಮಾರ್

ದೇಶದ ಪ್ರವಾಸೋದ್ಯಮ ಕ್ಷೇತ್ರಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರವು ವಿಶೇಷ ಆದ್ಯತೆ ನೀಡುತ್ತಿದ್ದು, ಶ್ರೀಕೃಷ್ಣ ಮತ್ತು ಶ್ರೀರಾಮ ಸರ್ಕ್ಯೂಟ್ ಸೃಷ್ಟಿಸಲಾಗುತ್ತಿದೆ ಎಂದು ಕೇಂದ್ರ ಸಚಿವ ಅನಂತ ಕುಮಾರ್ ತಿಳಿಸಿದರು...
ಕೇಂದ್ರ ಸಚಿವ ಅನಂತ್ ಕುಮಾರ್ (ಸಂಗ್ರಹ ಚಿತ್ರ)
ಕೇಂದ್ರ ಸಚಿವ ಅನಂತ್ ಕುಮಾರ್ (ಸಂಗ್ರಹ ಚಿತ್ರ)
Updated on

ಬೆಂಗಳೂರು: ದೇಶದ ಪ್ರವಾಸೋದ್ಯಮ ಕ್ಷೇತ್ರಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರವು ವಿಶೇಷ ಆದ್ಯತೆ ನೀಡುತ್ತಿದ್ದು, ಶ್ರೀಕೃಷ್ಣ ಮತ್ತು ಶ್ರೀರಾಮ ಸರ್ಕ್ಯೂಟ್  ಸೃಷ್ಟಿಸಲಾಗುತ್ತಿದೆ ಎಂದು ಕೇಂದ್ರ ಸಚಿವ ಅನಂತ ಕುಮಾರ್ ತಿಳಿಸಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, `ಹೃದಯ್' ಯೋಜನೆ ಮುಖಾಂತರ ದೇಶದ ಐತಿಹಾಸಿಕ ನಗರಗಳ ಅಭಿವೃದ್ಧಿಗೆ 500 ಕೋಟಿ ರು. ಬಳಸಲಾಗುತ್ತಿದೆ. ಇದರಲ್ಲಿ   ವಾರಣಾಸಿ, ಗಯಾ, ಪುರಿ ಸೇರಿದಂತೆ ಕರ್ನಾಟಕದ ಬದಾಮಿ ಸಹ ಸೇರಿದೆ. `ಪ್ರಸಾದ್' ಹೆಸರಿನ ಧಾರ್ಮಿಕ ಕ್ಷೇತ್ರಗಳ ಪ್ರದೇಶ ಅಭಿವೃದ್ಧಿಗೆ ಕ್ರಮಕೈಗೊಳ್ಳಲಾಗುತ್ತಿದೆ. ಬುದ್ಧ ಸರ್ಕ್ಯೂಟ್  ಇನ್ನಷ್ಟು ಅಭಿವೃದ್ಧಿಪಡಿಸುವ ಜೊತೆಗೆ ಶ್ರೀರಾಮ ಮತ್ತು ಶ್ರೀಕೃಷ್ಣ ಸರ್ಕ್ಯೂಟ್ ಅಭಿವೃದ್ಧಿಪಡಿಸಲಾಗುತ್ತಿದೆ.

ಶ್ರೀರಾಮ ಮತ್ತು ಶ್ರೀಕೃಷ್ಣರ ಅವತಾರದಲ್ಲಿ ಬರುವ ಊರುಗಳು ಈ ಸರ್ಕ್ಯೂಟ್‍ನಲ್ಲಿ  ಸೇರಲಿವೆ ಎಂದರು. ಮೋದಿ ನೇತೃತ್ವದಲ್ಲಿ ಕೇಂದ್ರ ಸರ್ಕಾರವು ಕೈಗೊಂಡ ಹಲವು ಪ್ರವಾಸೋದ್ಯಮ ಸ್ನೇಹಿ ಕ್ರಮದಿಂದಾಗಿ ಅಂತಾರಾಷ್ಟ್ರೀಯ ಪ್ರವಾಸಿಗರ ಭೇಟಿ ಸಂಖ್ಯೆ ಗಣನೀಯವಾಗಿ  ಹೆಚ್ಚಳವಾಗಿದೆ. ಈ ಹಿಂದಿನ ವರ್ಷಕ್ಕೆ ಹೋಲಿಸಿದರೆ ಶೇ.9ರಷ್ಟು ಅಂತಾರಾಷ್ಟ್ರೀಯ ಪ್ರವಾಸಿಗರು ದೇಶಕ್ಕೆ ಬಂದಿದ್ದಾರೆ. ಜೊತೆಗೆ ದೇಶದ ಆತಿಥ್ಯಮತ್ತು ಪ್ರವಾಸೋದ್ಯಮ ಕ್ಷೇತ್ರ ಶೇ.15  ಅಭಿವೃದ್ಧಿ ದಾಖಲಿಸಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com