ಡೆಹ್ರಾಡೂನ್: ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ರಿಷಿಕೇಶ್ ಗೆ ಭೇಟಿ ನೀಡಲಿದ್ದು, ತಮ್ಮ ಗುರುಗಳನ್ನು ಭೇಟಿಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿದ್ದಾರೆ.
ರಿಷಿಕೇಶದಲ್ಲಿರುವ ಶೀಶಮಝಾದಿ ಆಶ್ರಮದಲ್ಲಿರುವ ತಮ್ಮ ಗುರುಗಳಾದ ಸ್ವಾಮಿ ದಯಾನಿಧಿ ಗಿರಿ ಅವರೊಂದಿಗೆ 40 ನಿಮಿಷಗಳ ಕಾಲ ಕಳೆಯಲಿದ್ದು, ಧ್ಯಾನ ಮಾಡಲಿದ್ದಾರೆ.
ಸ್ವಾಮಿ ದಯಾನಂದ ಗಿರಿ ಅವರು ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿರುವ ಹಿನ್ನಲೆಯಲ್ಲಿ ಪ್ರಧಾನಿ ಮೋದಿ ಅವರ ಯೋಗಕ್ಷೇಮ ವಿಚಾರಿಸಲು ರಿಷಿಕೇಶಕ್ಕೆ ಭೇಟಿ ನೀಡುತ್ತಿದ್ದಾರೆ ಎನ್ನಲಾಗಿದೆ.
ಗುರುಗಳ ಭೇಟಿಯ ನಂತರ ಪ್ರಧಾನಿ ಮೋದಿ ಗಂಗಾ ನದಿ ತೀರದಲ್ಲಿ ಧ್ಯಾನ ಮಾಡಲಿದ್ದಾರೆ. ಲೋಕಸಭಾ ಚುನಾವಣಾ ಪ್ರಚಾರಕ್ಕಾಗಿ ಈ ಸ್ಥಳಕ್ಕೆ ಭೇಟಿದ ನೀಡಿದ್ದರು. ಚುನಾವಣೆಯಲ್ಲಿ ಗೆದ್ದ ನಂತರ ಇದೆ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡುತ್ತಿದ್ದಾರೆ.
Advertisement