ಛತ್ತೀಸ್ ಗಡ: ಪ್ರಧಾನಿ ನರೇಂದ್ರ ಮೋದಿ ರ್ಯಾಲಿಗೆ ಕೆಲವು ಸ್ಥಳೀಯರು ಹಿಡಿ ಶಾಪ ಹಾಕಿದ್ದಾರೆ. ಮೋದಿ ರ್ಯಾಲಿ ಯಿಂದಾಗಿ ಶವ ಸ್ಮಶಾನದಲ್ಲಿ ಶವಸಂಸ್ಕಾರ ಮಾಡೋಕೆ ಆಗಲಿಲ್ಲ. ಇದರಿಂದ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತ ಪಡಿಸಿದರು.
ನರೇಂದ್ರ ಮೋದಿ ರ್ಯಾಲಿ ಹಿನ್ನೆಲೆಯಲ್ಲಿ ಶವ ಸಂಸ್ಕಾರ ಮಾಡುವ ಸ್ಮಶಾನ ಪಾರ್ಕಿಂಗ್ ಸ್ಥಳವಾಗಿ ಮಾರ್ಪಟ್ಟಿತ್ತು. ಭದ್ರತೆ ದೃಷ್ಟಿಯಿಂದ ಸ್ಮಶಾನ ಪ್ರವೇಶಿಸಲು ಯಾರಿಗೂ ಅನುಮತಿ ನೀಡದೇ ಬೇರೆ ಸ್ಮಶಾನದಲ್ಲಿ ಸಂಸ್ಕಾರ ಮಾಡುವಂತೆ ಪೊಲೀಸರು ತಿಳಿಸಿದ್ದಾರೆ. ಇಲ್ಲದಿದ್ದರೇ ಕಾರ್ಯಕ್ರಮ ಮುಗಿದ ಕೆಲವು ಗಂಟೆಗಳ ನಂತರ ಸಂಸ್ಕಾರ ಮಾಡುವಂತೆ ಹಿರಿಯ ಅಧಿಕಾರಿಗಳು ತಿಳಿಸಿದ್ದು ಸ್ಥಳೀಯರನ್ನು ತೀವ್ರ ಕೆರಳಿಸಿತು.
ಈ ವಿಷಯ ನಗರಾದ್ಯಂತ ಹರಡುತ್ತಿದ್ದಂತೆ ಎಚ್ಚೆತ್ತುಕೊಂಡ ಜಿಲ್ಲಾಡಳಿತ ಸ್ಥಳೀಯರನ್ನು ಸಮಾಧಾನ ಪಡಿಸಲು ಯತ್ನಿಸಿತು. ಸ್ಮಶಾನ ಪ್ರವೇಶ ನಿರ್ಬಂಧ ತಮಗೆ ಯಾವುದೇ ಸೂಚನೆ ನೀಡದ ಜಿಲ್ಲಾಡಳಿತದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತ ಪಡಿಸಿದರು.
ಇದರಿಂದ ಅಲ್ಲಿನ ನಿವಾಸಿಗಳು ಅಧಿಕಾರಿಗಳಿಗೆ ಶಾಪ ಹಾಕಿದ್ರು.
ಚಂಡಿಗಡದಲ್ಲಿ ಪ್ರಧಾನಿ ಮೋದಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಉದ್ಘಾಟನೆ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಎಲ್ಲಡೆ ಬಿಗಿ ಪೊಲೀಸ್ ಸರ್ಪಗಾವಲು ಹಾಕಲಾಗಿದೆ.
Advertisement