ವಿಮಾನ ಟೈರ್ ಸ್ಪೋಟ- ಸ್ವಲ್ಪದರಲ್ಲೆ ಪಾರಾದ ಜಾರ್ಖಂಡ್ ಸಿಎಂ

ಲ್ಯಾಂಡಿಂಗ್ ವೇಳೆ ವಿಮಾನದ ಟೈರ್ ಸ್ಪೋಟಗೊಂಡು ಜಾರ್ಖಂಡ್ ಮುಖ್ಯಮಂತ್ರಿ ಸೇರಿದಂತೆ 154 ಮಂದಿ ಕೂದಲೆಳೆಯ ಅಂತರದಲ್ಲಿ ಪಾರಾದ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ರಾಂಚಿ(ಜಾರ್ಖಂಡ್ ): ಲ್ಯಾಂಡಿಂಗ್ ವೇಳೆ ವಿಮಾನದ ಟೈರ್ ಸ್ಪೋಟಗೊಂಡು  ಜಾರ್ಖಂಡ್ ಮುಖ್ಯಮಂತ್ರಿ ಸೇರಿದಂತೆ 154 ಮಂದಿ ಕೂದಲೆಳೆಯ ಅಂತರದಲ್ಲಿ ಪಾರಾದ ಘಟನೆ ನಡೆದಿದೆ.

 ಏರ್ ಗೊ ವಿಮಾನ  ಗುರುವಾರ ಸಂಜೆ ದೆಹಲಿಯಿಂದ ರಾಂಚಿಗೆ ಆಗಮಿಸಿತ್ತು. ಇಲ್ಲಿನ ಬಿರ್ಸಾ ಮುಂಡಾ ಏರ್ ಪೋರ್ಟ್ ನಲ್ಲಿ ಲ್ಯಾಂಡಿಂಗ್ ವೇಳೆ ವಿಮಾನದ ಹಿಂದಿನ ಟೈರ್ ಸ್ಪೋಟಗೊಂಡು ಆತಂಕ ನಿರ್ಮಾಣವಾಯಿತು. ತಕ್ಷಣ ಎಚ್ಚೆತ್ತ ಅಧಿಕಾರಿಗಳು ಜಾರ್ಖಂಡ್ ಮುಖ್ಯಮಂತ್ರಿ ರಘುಬರ್ ದಾಸ್ ಹಾಗೂ 154 ಮಂದಿಯನ್ನು ಇಳಿಸಿದ್ದು, ಎಲ್ಲ ಪ್ರಯಾಣಿಕರೂ ಅಪಾಯದಿಂದ ಪಾರಾಗಿದ್ದಾರೆ.

ಘಟನೆಯ ಸಂಬಂಧ ತನಿಖೆ ನಡೆಸುತ್ತಿದ್ದು, ತಾಂತ್ರಿಕ ದೋಷದಿಂದ ಈ ಅವಘಡ ಸಂಭವಿಸಿರಬಹುದು ಎಂದು ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com