ಜನತೆಯ ಕ್ಷಮೆ ಕೋರಿದ ಮೋದಿ

ನನ್ನ ಭೇಟಿಯಿಂದಾಗಿ ಚಂಡೀಗಡದ ನಾಗರಿಕರಿಗೆ ಆಗಿರುವ ತೊಂದರೆಗಾಗಿ ನಾನು ವಿಷಾದ ವ್ಯಕ್ತಪಡಿಸುತ್ತೇನೆ. ಹೀಗೆಂದು ಹೇಳಿದ್ದು ಪ್ರಧಾನಿ ನರೇಂದ್ರ ಮೋದಿ.
ಪ್ರಧಾನಿ ನರೇಂದ್ರ ಮೋದಿ (ಸಂಗ್ರಹ ಚಿತ್ರ)
ಪ್ರಧಾನಿ ನರೇಂದ್ರ ಮೋದಿ (ಸಂಗ್ರಹ ಚಿತ್ರ)

ಚಂಡೀಗಡ: ನನ್ನ ಭೇಟಿಯಿಂದಾಗಿ ಚಂಡೀಗಡದ ನಾಗರಿಕರಿಗೆ ಆಗಿರುವ ತೊಂದರೆಗಾಗಿ ನಾನು ವಿಷಾದ ವ್ಯಕ್ತಪಡಿಸುತ್ತೇನೆ. ಹೀಗೆಂದು ಹೇಳಿದ್ದು ಪ್ರಧಾನಿ ನರೇಂದ್ರ ಮೋದಿ.

ಶುಕ್ರವಾರ ಚಂಡೀಗಡದ ರ್ಯಾಲಿಯಲ್ಲಿ ಪಾಲ್ಗೊಂಡ ಬಳಿಕ ಪ್ರಧಾನಿ ಮೋದಿ ಅವರು ಟ್ವಿಟರ್‍ನಲ್ಲಿ ಈ ರೀತಿ ಪ್ರತಿಕ್ರಿಯಿಸಿದ್ದಾರೆ. ರ್ಯಾಲಿ ಹಿನ್ನೆಲೆಯಲ್ಲಿ ಚಂಡೀಗಡದಾದ್ಯಂತ ಶಾಲೆಗಳಿಗೆ ರಜೆ ಘೋಷಿಸಲಾಗಿತ್ತು. ಟ್ರಾಫಿಕ್  ಉಂಟಾಗಿ ವಿದ್ಯಾರ್ಥಿಗಳಿಗೆ ತೊಂದರೆ ಉಂಟಾಗಬಾರದು ಎಂಬ ಉದ್ದೇಶದಿಂದ ರಜೆ ನೀಡಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜತೆಗೆ, ನಗರದ ಪ್ರಮುಖ ರುದ್ರಭೂಮಿಯನ್ನು ಪಾರ್ಕಿಂಗ್ ಗಾಗಿ ಬಳಸಲಾಗಿತ್ತು. ಇದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಆಕ್ರೋಶ ವ್ಯಕ್ತವಾಯಿತು. ಈ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿದ ಪ್ರಧಾನಿ ಮೋದಿ,  ``ನನ್ನ ಭೇಟಿಯಿಂದಾಗಿ ಜನತೆಗೆ ತೊಂದರೆ ಉಂಟಾಯಿತು. ಅದಕ್ಕಾಗಿ ವಿಷಾಧಿಸುತ್ತೇನೆ ಎಂದಿದ್ದಾರೆ. ಅಲ್ಲದೆ, ಈ ಬಗ್ಗೆ ತನಿಖೆಗೆ ಆದೇಶಿಸಲಾಗುವುದೆಂದೂ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X

Advertisement

X
Kannada Prabha
www.kannadaprabha.com