ಆಂಧ್ರದಲ್ಲಿ ಲಾರಿ ಪಲ್ಟಿ: 18 ಮಂದಿ ದಾರುಣ ಸಾವು

ಅತಿ ವೇಗವಾಗಿ ಬರುತ್ತಿದ್ದ ಲಾರಿಯೊಂದು ತಿರುವಿನಲ್ಲಿ ಪಲ್ಪಿ ಹೊಡೆದ ಪರಿಣಾಮ 18 ಮಂದಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಆಂಧ್ರದಲ್ಲಿ ನಡೆದಿದೆ...
ಲಾರಿ ಪಲ್ಟಿ
ಲಾರಿ ಪಲ್ಟಿ
Updated on
ಗುಂಡಪಲ್ಲಿ(ಆಂಧ್ರ): ಅತಿ ವೇಗವಾಗಿ ಬರುತ್ತಿದ್ದ ಲಾರಿಯೊಂದು ತಿರುವಿನಲ್ಲಿ ಪಲ್ಪಿ ಹೊಡೆದ ಪರಿಣಾಮ 18 ಮಂದಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಆಂಧ್ರದಲ್ಲಿ ನಡೆದಿದೆ.
ಆಂಧ್ರದ ಪೂರ್ವ ಗೋದಾವರಿ ಜಿಲ್ಲೆಯ ಗುಂಡಪಲ್ಲಿ ಸಮೀಪ ದುರಂತ ಇಂದು ಮುಂಜಾನೆ ಭೀಕರ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಸ್ಥಳದಲ್ಲೇ 18 ಮಂದಿ ದಾರುಣವಾಗಿ ಸಾವನ್ನಪ್ಪಿದ್ದು, 15 ಮಂದಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿಲಾಗಿದೆ. 
ಪೂರ್ವ ಗೋದಾವರಿ ಮೂಲದ 35 ಕೂಲಿ ಕಾರ್ಮಿಕರು ಲಾರಿಯೊಂದರಲ್ಲಿ ತೆರಳುತ್ತಿದ್ದರು. ಅತಿ ವೇಗವಾಗಿ ಬರುತ್ತಿದ್ದ ಲಾರಿ ಚಾಲಕ ನಿಯಂತ್ರಣ ತಪ್ಪಿ ತಿರುವಿನಲ್ಲಿ ಪಲ್ಟಿ ಹೊಡೆದ ಪರಿಣಾಮ ಈ ಅನಾಹುತ ಸಂಭವಿಸಿದೆ. ಅಪಘಾತವಾಗುತ್ತಿದ್ದಂತೆ ಲಾರಿ ಚಾಲಕ ಹಾಗೂ ಕ್ಲೀನರ್ ಲಾರಿ ಬಿಟ್ಟು ಪರಾರಿಯಾಗಿದ್ದಾರೆ. 
ಘಟನಾ ಸ್ಥಳಕ್ಕೆ ಪೂರ್ವ ಗೋದಾವರಿಯ ಜಿಲ್ಲಾಧಿಕಾರಿ, ಎಸ್ಪಿ ರವಿಪ್ರತಾಪ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮೃತ ಕುಟುಂಬಕ್ಕೆ 2 ಲಕ್ಷ ಪರಿಹಾರ
ಲಾರಿ ಅಪಘಾತದಲ್ಲಿ ದಾರುಣವಾಗಿ ಸಾವನ್ನಪ್ಪಿದ 18 ಮಂದಿ ಕೂಲಿ ಕಾರ್ಮಿಕರ ಕುಟುಂಬಕ್ಕೆ ತಲಾ 2 ಲಕ್ಷ ರುಪಾಯಿ ಪರಿಹಾರವನ್ನು ಆಂಧ್ರ ಪ್ರದೇಶ ಸರ್ಕಾರ ಘೋಷಿಸಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com