ಹೈದರಾಬಾದ್: ತೆಲಂಗಾಣದಲ್ಲಿ ಪೊಲೀಸರು- ಮಾವೋವಾದಿಗಳ ನಡುವೆ ಗುಂಡಿನ ಕಾಳಗ ನಡೆದಿದ್ದು ಇಬ್ಬರು ಮಾವೋವಾದಿಗಳನ್ನು ಹತ್ಯೆ ಮಾಡಲಾಗಿದೆ.
ವಾರಂಗಲ್ ಜಿಲ್ಲೆಯ ವೆಂಗಲಪುರ ಅರಣ್ಯ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಬೆಳಿಗ್ಗೆ 6 ಗಂಟೆಯಿಂದ ಪೊಲೀಸರು- ಮಾವೋವಾದಿಗಳ ನಡುವೆ ಗುಂಡಿನ ಚಕಮಕಿ ನಡೆಯುತ್ತಿತ್ತು. ಅರಣ್ಯ ಪ್ರದೇಶದಲ್ಲಿ ಮಾವೋವಾದಿಗಳಿರುವ ಬಗ್ಗೆ ಮಾಹಿತಿ ಪಡೆದು ಕೂಂಬಿಂಗ್ ಕಾರ್ಯಾಚರಣೆ ಪ್ರಾರಂಭಿಸಿದ ವೇಳೆ ನಕ್ಸಲರನ್ನು ಹೊಡೆದುರುಳಿಸಲಾಗಿದೆ.
ಇದಕ್ಕೂ ಮುನ್ನ ಮಾವೋವಾದಿಗಳು ಜೆಸಿಬಿ ಅರ್ತ್ ಮೂವರ್ ನ್ನು ನಾಶಗೊಳಿಸಿದ್ದಾರೆ. ಕಳೆದ ತಿಂಗಳು ತೆಲಂಗಾಣದ ಸ್ಪೀಕರ್ ಮಧುಸೂಧನ ಚಾರಿಗೆ ಎಚ್ಚರಿಕೆ ವಿಧಿಸಿದ್ದ ಪೋಸ್ಟರ್ ಗಳು ಪತ್ತೆಯಾಗಿದ್ದವು.
Advertisement