ಬಿಸಿಸಿಐ ಅಧ್ಯಕ್ಷ ಜಗಮೋಹನ್ ದಾಲ್ಮಿಯಾಗೆ ಹೃದಯ ಶಸ್ತ್ರಚಿಕಿತ್ಸೆ

ತೀವ್ರ ಎದೆನೋವುಕಾಣಿಸಿಕೊಂಡಿದ್ದರಿಂದ ಬಿಸಿಸಿಐ ಅಧ್ಯಕ್ಷ ಜಗಮೋಹನ್ ದಾಲ್ಮಿಯಾ ಅವರು ಹೃದಯ ಶಸ್ತ್ರಚಿಕಿತ್ಸೆಗೊಳಗಾಗಿದ್ದಾರೆ.
ಜಗಮೋಹನ್ ದಾಲ್ಮಿಯಾ
ಜಗಮೋಹನ್ ದಾಲ್ಮಿಯಾ

ಕೋಲ್ಕತ್ತ: ತೀವ್ರ ಎದೆನೋವು ಕಾಣಿಸಿಕೊಂಡಿದ್ದರಿಂದ ಬಿಸಿಸಿಐ ಅಧ್ಯಕ್ಷ ಜಗಮೋಹನ್ ದಾಲ್ಮಿಯಾ ಅವರು ಹೃದಯ ಶಸ್ತ್ರಚಿಕಿತ್ಸೆಗೊಳಗಾಗಿದ್ದಾರೆ.

ಜಗಮೋಹನ್ ದಾಲ್ಮಿಯಾ ಸೆ.17 ರ ರಾತ್ರಿ ಕೋಲ್ಕತ್ತಾದ ಆಸ್ಪತ್ರೆಗೆ ದಾಖಲಾಗಿದ್ದರು. ಕಳೆದ ಕೆಲವು ತಿಂಗಳುಗಳಿಂದ ಜಗಮೋಹನ್ ದಾಲ್ಮಿಯಾ ಅವರಿಗೆ ಅನಾರೋಗ್ಯದ ಸಮಸ್ಯೆ ಕಾಡುತ್ತಿತ್ತು. ರಾತ್ರಿ ಎದೆನೋವು ಕಾಣಿಸಿಕೊಂಡಿದ್ದರಿಂದ ಅವರನ್ನು ಬಿಎಂ ಬಿರ್ಲಾ ಹೃದಯ ಸಂಶೋಧನಾ ಸಂಸ್ಥೆಗೆ ದಾಖಲಿಸಲಾಯಿತು.

ದಾಲ್ಮಿಯಾ ಆಸ್ಪತ್ರೆಗೆ ದಾಖಲಾದ ವೇಳೆ ದಾಲ್ಮಿಯಾ ಪುತ್ರ ಅಭಿಷೇಕ್ ಹಾಗೂ ಭಾರತ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಉಪಸ್ಥಿತರಿದ್ದರು. ಜಗಮೋಹನ್ ದಾಲ್ಮಿಯಾ ಅವರ ಆರೋಗ್ಯ ಹದಗೆಟ್ಟಿರುವುದರ ಬಗ್ಗೆ ಬಿಸಿಸಿಐ ನಲ್ಲಿ ಚರ್ಚೆಯ ವಿಷಯವಾಗಿತ್ತು.
ಜಗಮೋಹನ್ ದಾಲ್ಮಿಯಾ ಅವರು ಕಳೆದ ಮೂರು ದಶಕಗಳಿಂದ ಬಿಸಿಸಿಐನೊಂದಿಗೆ ಒಡನಾಟ  ಹೊಂದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com