ದೇಶ
ಗೋಮಾಂಸ ನಿಷೇಧ ತಡೆಗೆ ಬಾಂಬೆ ಹೈಕೋರ್ಟ್ ನಕಾರ
ಮಹಾರಾಷ್ಟ್ರದಲ್ಲಿ ಗೋಮಾಂಸ ನಿಷೇಧಕ್ಕೆ ತಾತ್ಕಾಲಿಕ ತಡೆ ನೀಡಲು ಸೋಮವಾರ ಬಾಂಬೆ ಹೈಕೋರ್ಟ್ ನಿರಾಕರಿಸಿದೆ.
ಮುಂಬೈ: ಮಹಾರಾಷ್ಟ್ರದಲ್ಲಿ ಗೋಮಾಂಸ ನಿಷೇಧಕ್ಕೆ ತಾತ್ಕಾಲಿಕ ತಡೆ ನೀಡಲು ಸೋಮವಾರ ಬಾಂಬೆ ಹೈಕೋರ್ಟ್ ನಿರಾಕರಿಸಿದೆ.
ಬಕ್ರೀದ್ ವೇಳೆ ಮೂರು ದಿನಗಳ ಕಾಲ ಗೋಮಾಂಸ ನಿಷೇಧಕ್ಕೆ ತಾತ್ಕಾಲಿಕ ತಡೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್, ಈ ಬಗ್ಗೆ ಮಹಾರಾಷ್ಟ್ರ ಸರ್ಕಾರವೇ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಹೇಳಿದೆ.
ಮಾರ್ಚ್ 4ರಿಂದ ಮಹಾರಾಷ್ಟ್ರದಲ್ಲಿ ಗೋಮಾಂಸ ನಿಷೇಧಿಸಲಾಗಿದೆ. ನಿಯಮ ಉಲ್ಲಂಘಿಸಿದವರಿಗೆ 5 ವರ್ಷ ಶಿಕ್ಷೆ ಮತ್ತು 10 ಸಾವಿರ ರುಪಾಯಿ ದಂಡ ವಿಧಿಸುವ ಅವಕಾಶ ಇದೆ.