ಕೇಂದ್ರ ಸರ್ಕಾರ ನೇತಾಜಿ ಕಡತಗಳನ್ನು ಬಹಿರಂಗಪಡಿಸಬೇಕು: ಮಮತಾ

ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷ್‌ಚಂದ್ರ ಬೋಸ್ ಅವರಿಗೆ ಸಂಬಂಧಿಸಿದ ಕಡತಗಳನ್ನು ಬಹಿರಂಗಪಡಿಸಿದ ರಾಜ್ಯ ಸರ್ಕಾರದ...
ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿ
Updated on

ಕೋಲ್ಕತಾ: ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷ್‌ಚಂದ್ರ ಬೋಸ್ ಅವರಿಗೆ ಸಂಬಂಧಿಸಿದ ಕಡತಗಳನ್ನು ಬಹಿರಂಗಪಡಿಸಿದ ರಾಜ್ಯ ಸರ್ಕಾರದ ನಿರ್ಧಾರವನ್ನೇ ಕೇಂದ್ರ ಅನುಸರಿಸಬೇಕು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

'ನಾವು ನೇತಾಜಿಗೆ ಸಂಬಂಧಿಸಿದ 64 ಕಡತಗಳನ್ನು ಬಹಿರಂಗಪಡಿಸಿದ್ದೇವೆ. ನೇತಾಜಿ ಅವರ ಅಪಾರ ಕೊಡುಗೆಗಳನ್ನು ಸರಿಯಾಗಿ ಮೌಲ್ಯಮಾಪನ ಮಾಡಿಲ್ಲ. ಕೇಂದ್ರ ಸರ್ಕಾರ ನಮ್ಮ ಹಾಗೆ ಎಲ್ಲಾ ಕಡತಗಳನ್ನು ಬಹಿರಂಗಪಡಿಸಬೇಕು' ಎಂದು ಬ್ಯಾನರ್ಜಿ ವಿಧಾಸಭೆಯಲ್ಲಿ ಹೇಳಿದ್ದಾರೆ.

1937ರಿಂದ 47ರವರೆಗೆ ಸಚಿವ ಸಂಪುಟ ತೆಗೆದುಕೊಂಡ ನಿರ್ಣಯಗಳಿಗೆ ಸಂಬಂಧಿಸಿದ ಕಡತಗಳನ್ನು ಡಿಜಿಟಲೈಸ್ ಮಾಡಲಾಗುವುದು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ತಿಳಿಸಿದ್ದಾರೆ.

ಕಳೆದ ಶುಕ್ರವಾರ ಪಶ್ಚಿಮ ಬಂಗಾಳ ಸರ್ಕಾರ ನೇತಾಜಿಗೆ ಸಂಬಂಧಿಸಿದ 64 ಕಡತಗಳನ್ನು ಬಹಿರಂಗಪಡಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com