ಕೋಲ್ಕತಾ: ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷ್ಚಂದ್ರ ಬೋಸ್ ಅವರಿಗೆ ಸಂಬಂಧಿಸಿದ ಕಡತಗಳನ್ನು ಬಹಿರಂಗಪಡಿಸಿದ ರಾಜ್ಯ ಸರ್ಕಾರದ ನಿರ್ಧಾರವನ್ನೇ ಕೇಂದ್ರ ಅನುಸರಿಸಬೇಕು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
'ನಾವು ನೇತಾಜಿಗೆ ಸಂಬಂಧಿಸಿದ 64 ಕಡತಗಳನ್ನು ಬಹಿರಂಗಪಡಿಸಿದ್ದೇವೆ. ನೇತಾಜಿ ಅವರ ಅಪಾರ ಕೊಡುಗೆಗಳನ್ನು ಸರಿಯಾಗಿ ಮೌಲ್ಯಮಾಪನ ಮಾಡಿಲ್ಲ. ಕೇಂದ್ರ ಸರ್ಕಾರ ನಮ್ಮ ಹಾಗೆ ಎಲ್ಲಾ ಕಡತಗಳನ್ನು ಬಹಿರಂಗಪಡಿಸಬೇಕು' ಎಂದು ಬ್ಯಾನರ್ಜಿ ವಿಧಾಸಭೆಯಲ್ಲಿ ಹೇಳಿದ್ದಾರೆ.
1937ರಿಂದ 47ರವರೆಗೆ ಸಚಿವ ಸಂಪುಟ ತೆಗೆದುಕೊಂಡ ನಿರ್ಣಯಗಳಿಗೆ ಸಂಬಂಧಿಸಿದ ಕಡತಗಳನ್ನು ಡಿಜಿಟಲೈಸ್ ಮಾಡಲಾಗುವುದು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ತಿಳಿಸಿದ್ದಾರೆ.
ಕಳೆದ ಶುಕ್ರವಾರ ಪಶ್ಚಿಮ ಬಂಗಾಳ ಸರ್ಕಾರ ನೇತಾಜಿಗೆ ಸಂಬಂಧಿಸಿದ 64 ಕಡತಗಳನ್ನು ಬಹಿರಂಗಪಡಿಸಿತ್ತು.
Advertisement