1965ರ ಭಾರತ-ಪಾಕ್ ಯುದ್ಧ: ಹುತಾತ್ಮ ಯೋಧರಿಗೆ ಪ್ರಧಾನಿ ಶ್ರದ್ಧಾಂಜಲಿ

1965ರ ಭಾರತ - ಪಾಕಿಸ್ತಾನ ಯುದ್ಧದಲ್ಲಿ ಹುತಾತ್ಮರಾದ ಯೋಧರಿಗೆ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದರು.
ಅಮರ್ ಜವಾನ್ ಜ್ಯೋತಿಗೆ ಪುಷ್ಪ ನಮನ ಸಲ್ಲಿಸುತ್ತಿರುವ ಪ್ರಧಾನಿ
ಅಮರ್ ಜವಾನ್ ಜ್ಯೋತಿಗೆ ಪುಷ್ಪ ನಮನ ಸಲ್ಲಿಸುತ್ತಿರುವ ಪ್ರಧಾನಿ
Updated on

ನವದೆಹಲಿ: 1965ರ ಭಾರತ - ಪಾಕಿಸ್ತಾನ ಯುದ್ಧದಲ್ಲಿ ಹುತಾತ್ಮರಾದ ಯೋಧರಿಗೆ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದರು.

ದೆಹಲಿಯ ಅಮರ್ ಜವಾನ್ ಜ್ಯೋತಿಯಲ್ಲಿ ಪ್ರಧಾನಿ ಮೋದಿ ಅವರು ಪುಷ್ಪ ನಮನ ಅರ್ಪಿಸಿ ಶ್ರದ್ಧಾಂಜಲಿ ಸಲ್ಲಿಸಿದರು.

ಈ ವೇಳೆ ಭಾರತೀಯ ಭೂಸೇನಾ ಮುಖ್ಯಸ್ಥ ಜನರನ್‌ ದಲ್ಜೀರ್‌ ಸಿಂಗ್‌ ಸುಹಾಗ್‌, ವಾಯುಪಡೆ ಮುಖ್ಯಸ್ಥ ಎರ್‌ಚೀಫ್ ಮಾರ್ಷಲ್‌ ಅರುಪ್‌ ರಾಹಾ , ನೌಕಾಪಡೆ ಮುಖ್ಯಸ್ಥ ಎಡ್ಮಿರಲ್‌ ಆರ್‌.ಕೆ ಧೋವನ್‌ ಉಪಸ್ಥಿತರಿದ್ದರು.

1965 ರಲ್ಲಿ ಭಾರತ ಪಾಕ್ ನಡುವಿನ ಯುದ್ಧ ಸೆಪ್ಟಂಬರ್‌ 23 ರಂದು ಭಾರತದ ಗೆಲುವಿನೊಂದಿಗೆ ಮುಕ್ತಾಯಗೊಂಡಿತ್ತು. ಯುದ್ಧ ಗೆದ್ದ ಸಂಭ್ರಮಕ್ಕೆ ಇಂದಿಗೆ 50 ವರ್ಷ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com