ಆಪರೇಷನ್ ಥಿಯೇಟರ್ ಗೆ ಬಂದ ಹಾವು: ಶಸ್ತ್ರ ಚಿಕಿತ್ಸೆ ಬಿಟ್ಟು ಹೋಡಿದ ಸರ್ಜನ್

ಆಪರೇಷನ್ ಥಿಯೇಟರ್ ಗೆ ಹಾವು ನುಗ್ಗಿದ ಪರಿಣಾಮ, ಶಸ್ತ್ರ ಚಿಕಿತ್ಸೆ ನಡೆಸುತ್ತಿದ್ದ ವೈದ್ಯ ಓಡಿ ಹೋದ ಘಟನೆ ಆಂಧ್ರ ಪ್ರದೇಶದ ಗುಂಟೂರು ಸರ್ಕಾರಿ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಹೈದರಾಬಾದ್: ಆಪರೇಷನ್ ಥಿಯೇಟರ್ ಗೆ ಹಾವು ನುಗ್ಗಿದ ಪರಿಣಾಮ, ಶಸ್ತ್ರ ಚಿಕಿತ್ಸೆ ನಡೆಸುತ್ತಿದ್ದ ವೈದ್ಯ ಓಡಿ ಹೋದ ಘಟನೆ ಆಂಧ್ರ ಪ್ರದೇಶದ ಗುಂಟೂರು ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ. ಹಾವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸರ್ಜನ್ ಶಸ್ತ್ರ ಚಿಕಿತ್ಸೆ ನಡೆಸಲು ಹಿಂದೇಟು ಹಾಕಿದ್ದಾರೆ.

ಇನ್ನು ಇದೇ ಆಸ್ಪತ್ರೆಯಲ್ಲಿ ಮತ್ತೊಂದು ಹಾವು ರೇಡಿಯಾಲಜಿ ವಾರ್ಡ್ ನಲ್ಲಿ ಕಾಣಿಸಿಕೊಂಡಿತ್ತು. ಕಳೆದ ಕೆಲ ದಿನಗಳ ಹಿಂದೆ ಇದೇ ಸರ್ಕಾರಿ ಆಸ್ಪತ್ರೆಯಲ್ಲಿ 10 ದಿನಗಳ ಶಿಶುವಿಗೆ ಇಲಿ ಕಚ್ಚಿ ಮಗು ಸಾವನ್ನಪ್ಪಿದ ಘಟನೆ ನಡೆದಿತ್ತು.

ಇನ್ನು ಈ ಪ್ರಕರಣ ಸಂಬಂಧ ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರ ಬಾಬು ನಾಯ್ಡು ಪ್ರಕರಣದ ತನಿಖೆ ನಡೆಸಿ ಮೂವರು ವೈದ್ಯಾಧಿಕಾರಿಗಳನ್ನು ಅಮಾನತು ಮಾಡಿದ್ದರು.ಈ ಘಟನೆಯ ನಂತರ ಆಸ್ಪತ್ರೆ ಆಡಳಿತ ಮಂಡಳಿ ಆಸ್ಪತ್ರೆಯನ್ನು ಸ್ವಚ್ಚಗೊಳಿಸಲು ಆರಂಭಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com