ಸುಬ್ರಹ್ಮಣ್ಯನ್‌ ಸ್ವಾಮಿ
ಸುಬ್ರಹ್ಮಣ್ಯನ್‌ ಸ್ವಾಮಿ

ನೆಹರೂ 'ಥರ್ಡ್‌ ಕ್ಲಾಸ್‌ ಪಾಸ್‌', ಜೆಎನ್‌ಯು ವಿದ್ಯಾರ್ಥಿಗಳು,ಪ್ರಾಧ್ಯಾಪಕರು 'ನಕ್ಸಲರು': ಸುಬ್ರಹ್ಮಣ್ಯನ್‌ ಸ್ವಾಮಿ

ಬಿಜೆಪಿ ನಾಯಕ ಸುಬ್ರಹ್ಮಣ್ಯನ್‌ ಸ್ವಾಮಿ ಅವರು ಈಗ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ದೇಶದ ಪ್ರಥಮ ಪ್ರಧಾನಿ ಪಂಡಿತ್‌ ಜವಾಹರಲಾಲ್‌...
Published on

ನವದೆಹಲಿ: ಬಿಜೆಪಿ ನಾಯಕ ಸುಬ್ರಹ್ಮಣ್ಯನ್‌ ಸ್ವಾಮಿ ಅವರು ಈಗ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ದೇಶದ ಪ್ರಥಮ ಪ್ರಧಾನಿ ಪಂಡಿತ್‌ ಜವಾಹರಲಾಲ್‌ ನೆಹರೂ ಅವರು ಥರ್ಡ್‌ ಕ್ಲಾಸ್‌ ಪಾಸ್‌' ಎಂದಿದ್ದ ಸ್ವಾಮಿ, ಈಗ ಜವಾಹರಲಾಲ್‌ ನೆಹರೂ ವಿಶ್ವವಿದ್ಯಾಲಯ(ಜೆಎನ್‌ಯು)ದ ವಿದ್ಯಾರ್ಥಿಗಳು ಹಾಗೂ ಪ್ರಾಧ್ಯಾಪಕರನ್ನು ನಕ್ಸಲರು ಎಂದಿದ್ದಾರೆ.

'ವಿದ್ಯಾರ್ಥಿಗಳು ಮಾತ್ರ ಅಲ್ಲ, ಜೆಎನ್ ಯು ಪ್ರಾಧ್ಯಾಪಕರನ್ನು ನಾನು ನಕ್ಸಲರು' ಎಂದು ಕರೆಯುವುದಾಗಿ ಸ್ವಾಮಿ ವರದಿಗಾರರ ಪ್ರಶ್ನೆಗೆ ಶುಕ್ರವಾರ ಪ್ರತಿಕ್ರಿಯಿಸಿದ್ದಾರೆ.

ದೆಹಲಿಯ ಜವಾಹರಲಾಲ್‌ ನೆಹರೂ ವಿಶ್ವವಿದ್ಯಾಲಯಕ್ಕೆ ಸುಭಾಶ್ಚಂದ್ರ ಬೋಸ್‌ ಅವರ ಹೆಸರನ್ನು ಇಡಬೇಕೆಂದು ಶಿಫಾರಸು ಮಾಡಿದ್ದೇವೆ. ಕಾರಣ ಬೋಸ್‌ ಒಬ್ಬ ಅತ್ಯುನ್ನತ ಶಿಕ್ಷಣ ಪಡೆದ ಸಾಧಕ; ಆದರೆ ನೆಹರೂ ಒಬ್ಬ ಥರ್ಡ್‌ ಕ್ಲಾಸ್‌ ಪಾಸ್‌ ವ್ಯಕ್ತಿ' ಎಂದು ಸ್ವಾಮಿ ಹೇಳಿದ್ದಾರೆ.

ವರದಿಗಳ ಪ್ರಕಾರ, ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯವು ಸ್ವಾಮಿ ಅವರಿಗೆ ಜೆಎನ್‌ಯು ಕುಲಪತಿ ಹುದ್ದೆ ನೀಡುವ ಸಾಧ್ಯತೆ ಇದೆ. ಆದರೆ ಸ್ವಾಮಿ ಅವರು ಈ ಹುದ್ದೆ ವಹಿಸಿಕೊಳ್ಳಲು ಕೆಲವು ಶರತ್ತುಗಳನ್ನು ಹಾಕಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com