ಕೋಲ್ಕತಾ: ಪಶ್ಚಿಮ ಬಂಗಾಳದಲ್ಲಿ ಕಳ್ಳಭಟ್ಟಿ ಸೇವಿಸಿ 8 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಸಂಭವಿಸಿದೆ.
ಮಿಡ್ನಾಪುರ್ ಜಿಲ್ಲೆಯ 2 ಹಳ್ಳಿಗಳಲ್ಲಿ ಕಳ್ಳಭಟ್ಟಿ ಸೇವಿಸಿ 10 ಮಂದಿ ಮೃತಪಟ್ಟಿದ್ದು, 7 ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿರುವ ಘಟನೆ ನಿನ್ನೆ ಸಂಜೆ ನಡೆದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ 16 ಮಂದಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಗಂಭೀರ ಸ್ಥಿತಿಯಲ್ಲಿರುವ ನಾಲ್ವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಲಾಗಿದ್ದು, ಕಳ್ಳಭಟ್ಟಿಯ ಕುರಿಯತಾಗಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.