ಹೈದರಾಬಾದ್: ತೆಲಂಗಾಣ ಸರ್ಕಾರ ರೈತರೊಂದಿಗಿದ್ದು, ರೈತರು ಆತ್ಮಹತ್ಯೆ ಮಾಡಿಕೊಳ್ಳದಂತೆ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಮನವಿ ಮಾಡಿದ್ದಾರೆ.
ವಿಧಾನಸಭೆಯಲ್ಲಿ ರೈತರ ಆತ್ಮಹತ್ಯೆ ವಿಷಯದ ಬಗ್ಗೆ ನಡೆದ ಚರ್ಚೆಯಲ್ಲಿ ಮಾತನಾಡಿದ ಚಂದ್ರಶೇಖರ್ ರಾವ್ ರೈತರ ಸಮಸ್ಯೆಗಳನ್ನು ಬಗೆಹರಿಸಲು ತೆಲಂಗಾಣ ಸರ್ಕಾರ ಕ್ರಮ ಕೈಗೊಂಡಿದೆ. ರೈತರು ಅತ್ಮಹೆತ್ಯೆ ಮಾಡಿಕೊಳ್ಳುವುದನ್ನು ನಿಲ್ಲಿಸಬೇಕು ಎಂದು ಚಂದ್ರಶೇಖರ್ ರಾವ್ ಮನವಿ ಮಾಡಿದ್ದಾರೆ.
ಕಳೆದ 16 ತಿಂಗಳಲ್ಲಿ ರೈತರ ಅತ್ಮಹೆತ್ಯ ತಡೆಗಟ್ಟಲು ತೆಲಂಗಾಣ ಸರ್ಕಾರ ಕ್ರಮಗಳ ಬಗ್ಗೆ ವಿಧಾನಸಭೆಗೆ ಮಾಹಿತಿ ನೀಡಿದ ಅವರು, ಸಾಲ ಮನ್ನಾ ಮಾಡುವುದಕ್ಕೆ 9 ,000 ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದ್ದಾರೆ. ಈವರೆಗೂ 36 ಲಕ್ಷ ರೈತರ ಸಾಲ ಮನ್ನಾ ಮಾಡಲು 8 ,000 ಕೋಟಿ ರೂಪಾಯಿ ಬಿಡುಗಡೆ ಮಾಡಿರುವುದಾಗಿ ಕೆ.ಸಿ.ಆರ್ ತಿಳಿಸಿದ್ದಾರೆ.
Advertisement