ನವದೆಹಲಿ:ದೇಶೀಯ ಹಸುಗಳನ್ನು ಹತ್ಯೆ ನಿಷೇಧ ವಿಧಿಸುವ ವಿಷಯಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ(ಎನ್.ಜಿ.ಟಿ) ಕೇಂದ್ರ ಸರ್ಕಾರಕ್ಕೆ ನೊಟೀಸ್ ಜಾರಿ ಮಾಡಿದೆ.
ನ್ಯಾ.ಯು.ಡಿ ಸಾಳ್ವಿ ಕೃಷಿ ಸಚಿವಾಲಯಕ್ಕೆ ನೊಟೀಸ್ ಜಾರಿ ಮಾಡಿದ್ದು ದೇಶಿ ಹಸುಗಳ ಹತ್ಯೆಗೆ ನಿಷೇಧ ವಿಧಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಅ.30 ರೊಳಗೆ ಪ್ರತಿಕ್ರಿಯೆ ನೀಡಬೇಕೆಂದು ಸೂಚನೆ ನೀಡಿದೆ.
ಪರಿಸರವಾದಿಯೂ ಆಗಿರುವ ನ್ಯಾಯವಾದಿ ಅಶ್ವಿನಿ ಕುಮಾರ್ ಅವರು ದೇಶಿ ಹಸುಗಳ ಹತ್ಯೆಗೆ ದೇಶಾದ್ಯಂತ ನಿಷೇಧ ವಿಧಿಸಬೇಕೆಂದು ಕೋರಿ ಹಸಿರು ನ್ಯಾಯಾಧಿಕರಣಕ್ಕೆ ಅರ್ಜಿ ಸಲ್ಲಿಸಿದ್ದರು.
ದೇಶಾದ್ಯಂತ ಸ್ಥಳೀಯ ಗೋವುಗಳ ಸಂತತಿ ಕಡಿಮೆಯಾಗುತ್ತಿದ್ದು, ದೇಶಿ ಹಸುಗಳ ಬದಲಿಗೆ ಹೈಬ್ರೀಡ್ ಹಸುಗಳನ್ನು ಬೆಳೆಸಲಾಗುತ್ತದೆ. ಅಭಿವೃದ್ಧಿ ಹೊಂದಿರುವ ರಾಷ್ಟ್ರಗಳು ಜಾನುವಾರುಗಳ ವೈವಿಧ್ಯತೆ ಸಂರಕ್ಷಿಸಲು ಕ್ರಮ ಕೈಗೊಳ್ಳುತ್ತಿವೆ. ಆದರೆ ಭಾರತದಲ್ಲಿ ಸ್ಥಳೀಯ ಹಸುಗಳ ಸಂತತಿ ಅಳಿವಿನ ಅಂಚಿನಲ್ಲಿದ್ದು ಕೇಂದ್ರ, ರಾಜ್ಯ ಸರ್ಕಾರಗಳು ಮೂಕಪ್ರೇಕ್ಷಕನಂತೆ ವರ್ತಿಸುತ್ತಿವೆ ಎಂದು ಅಶ್ವಿನಿ ಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇನ್ನು ಗೋಹತ್ಯೆ ವಿಚಾರಕ್ಕೆ ಸಂಬಂಧಿಸಿದಂತೆ ಜಮ್ಮು-ಕಾಶ್ಮೀರ ಹೈಕೋರ್ಟ್ ನೀಡಿರುವ ಆದೇಶದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಿಚಾರಣೆ ನಡೆಸಲಿದೆ.
Advertisement