ಶ್ರೀನಗರ: ಟಿ20 ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಟೀಂ ಇಂಡಿಯಾ ಪರಾಭವಗೊಂಡ ಹಿನ್ನಲೆಯಲ್ಲಿ ಶ್ರೀನಗರದ ನ್ಯಾಷನಲ್ ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಸಂಘರ್ಷವುಂಟಾಗಿದ್ದು, ಪ್ರಸ್ತುತ ಕಾಲೇಜ್ನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಟೀಂ ಇಂಡಿಯಾದ ಪರಾಭವದ ಬಗ್ಗೆ ವಾಗ್ವಾದ ನಡೆದು ವಿದ್ಯಾರ್ಥಿಗಳ ಎರಡು ಗುಂಪಿನ ಮಧ್ಯೆ ಸಂಘರ್ಷವೇರ್ಪಟ್ಟಿತ್ತು. ಶುಕ್ರವಾರ ವಿದ್ಯಾರ್ಥಿಗಳ ನಡುವೆ ಸಂಘರ್ಷವೇರ್ಪಟ್ಟಿದ್ದು, ಮುಂದಿನ ಆದೇಶ ಲಭಿಸುವವರೆಗೆ ಎನ್ಐಟಿಯನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ ಎಂದು ಅಧಿಕೃತರು ಹೇಳಿದ್ದಾರೆ.