"ರಿಮೋಟ್ ಕಂಟ್ರೋಲ್" ಸರ್ಕಾರದಿಂದಾಗಿ ದೇಶ ನಲುಗಿತ್ತು: ಪ್ರಧಾನಿ ಮೋದಿ

ಕಳೆದ ಯುಪಿಎ ಅವಧಿಯ "ರಿಮೋಟ್ ಕಂಟ್ರೋಲ್" ಸರ್ಕಾರದಿಂದಾಗಿ ದೇಶ ಸಾಕಷ್ಟು ನಲುಗಿತ್ತು. ಆದೇ ಸ್ಥಿತಿ ಅಸ್ಸಾಂನಲ್ಲಿ ಮರುಕಳಿಸಲು ತಾವು ಬಿಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ...
ಪ್ರಧಾನಿ ನರೇಂದ್ರ ಮೋದಿ (ಸಂಗ್ರಹ ಚಿತ್ರ)
ಪ್ರಧಾನಿ ನರೇಂದ್ರ ಮೋದಿ (ಸಂಗ್ರಹ ಚಿತ್ರ)
Updated on

ರಾಹಾ: ಕಳೆದ ಯುಪಿಎ ಅವಧಿಯ "ರಿಮೋಟ್ ಕಂಟ್ರೋಲ್" ಸರ್ಕಾರದಿಂದಾಗಿ ದೇಶ ಸಾಕಷ್ಟು ನಲುಗಿತ್ತು. ಆದೇ ಸ್ಥಿತಿ ಅಸ್ಸಾಂನಲ್ಲಿ ಮರುಕಳಿಸಲು ತಾವು ಬಿಡುವುದಿಲ್ಲ ಎಂದು ಪ್ರಧಾನಿ  ನರೇಂದ್ರ ಮೋದಿ ಹೇಳಿದ್ದಾರೆ.

ಶುಕ್ರವಾರ ಅಸ್ಸಾಂನ ರಾಹಾದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಯುಪಿಎ ಸರ್ಕಾರ ಮತ್ತು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ತೀವ್ರ  ತರಾಟೆಗೆ ತೆಗೆದುಕೊಂಡರು. ಈ ವೇಳೆ ಮಾತನಾಡಿದ ಅವರು, ಟ್ ಕಂಟ್ರೋಲ್" ಸರ್ಕಾರದಿಂದಾಗಿ ದೇಶ ಸಾಕಷ್ಟು ನಲುಗಿತ್ತು. ಆದೇ ಸ್ಥಿತಿ ಅಸ್ಸಾಂನಲ್ಲಿ ಮರುಕಳಿಸಲು ತಾವು ಬಿಡುವುದಿಲ್ಲ  ಎಂದು ಹೇಳಿದರು.

ಅಂತೆಯೇ ತಮ್ಮ ವಿರುದ್ಧ ಈ ಹಿಂದೆ ವಾಗ್ದಾಳಿ ನಡೆಸಿದ್ದ ಮಾಜಿ ಪ್ರಧಾನಿ ಮನ ಮೋಹನ್ ಸಿಂಗ್ ಅವರ ವಿರುದ್ಧವೂ ಟೀಕೆ ಮಾಡಿದ ನರೇಂದ್ರ ಮೋದಿ, "ನಮ್ಮದು ಮಾತಿನ  ಸರ್ಕಾರವಾಗಿರಲಿಲ್ಲ, ಹೆಚ್ಚು ಕೆಲಸ ಮಾಡುವ ಸರ್ಕಾರವಾಗಿತ್ತು' ಎಂಬ ಟೀಕೆಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದರು. "ಮನಮೋಹನ್ ಸಿಂಗ್ ಅವರೇ, ನೀವು ಅಧಿಕಾರದಲ್ಲಿದ್ದಾಗ ನಡೆದ  ಅವ್ಯವಹಾರಗಳೇ ಇಂದು ಹೆಚ್ಚೆಚ್ಚು ಮಾತನಾಡುತ್ತಿವೆ. ಡಾ.ಸಿಂಗ್ ಅವರು ಹೇಳಿದ್ದು ನಿಜ, ಅವರು ಅಧಿಕಾರದಲ್ಲಿದ್ದಾಗ ನಡೆದ ಅವ್ಯವಹಾರಗಳು ಇಂದಿಗೂ ಮಾತನಾಡುತ್ತಿವೆ ಎಂದುಸ  ಕುಟುಕಿದರು.

ಕಾಂಗ್ರೆಸ್ ಪಕ್ಷ ಅಸ್ಸಾಂ ಅನ್ನು ತನ್ನ ರಾಜಕೀಯ ಸ್ವಹಿತಾಸಕ್ತಿಗೆ ಬಳಸಿಕೊಳ್ಳುತ್ತಿದ್ದು, ಹಿಂದುಳಿದ ಮತ್ತು ರಿಮೋಟ್ ಕಂಟ್ರೋಲ್ ಪ್ರದೇಶವನ್ನಾಗಿ ಕಾಂಗ್ರೆಸ್ ಉಳಿಸಿಕೊಂಡಿದೆ. ಕಾಂಗ್ರೆಸ್​ನ  ಅಸ್ಥಿರ ದುರಾಡಳಿತದಿಂದ ರಾಜ್ಯ ಕಂಗೆಟ್ಟಿದ್ದು, ಬಿಜೆಪಿ ನೇತೃತ್ವದ ಸರ್ಕಾರವನ್ನು ಬೃಹತ್ ಅಂತರದಿಂದ ಗೆಲ್ಲಿಸುವ ಮೂಲಕ ರಾಜಕೀಯ ಅಸ್ಥಿರತೆ ಸೃಷ್ಟಿಸಿರುವ ಪಕ್ಷವನ್ನು ಅಧಿಕಾರದಿಂದ  ಕಿತ್ತೊಗೆಯಬೇಕು ಮತ್ತು ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಪ್ರಧಾನಿ ಮೋದಿ ಅಸ್ಸಾಂ ಜನತೆಯಲ್ಲಿ ಮನವಿ ಮಾಡಿದರು.

ಅಲ್ಲದೆ ಬಿಜೆಪಿ ಅಧಿಕಾರಕ್ಕೆ ಬಂದರೆ ಅಸ್ಸಾಂ ಅನ್ನು ಹಿಂದುಳಿದ ರಾಜ್ಯ ಮತ್ತು ರಿಮೋಟ್ ಕಂಟ್ರೋಲ್ ಮುಕ್ತವಾಗಿಸುವುದಾಗಿ ಭರವಸೆ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com