ದೆಹಲಿಯಲ್ಲಿ ಪ್ರತಿ ತಿಂಗಳು 15 ದಿನ ಸಮ-ಬೆಸ ನಿಯಮ ಜಾರಿ ಸಾಧ್ಯತೆ: ಕೇಜ್ರಿವಾಲ್

ರಾಷ್ಟ್ರರಾಜಧಾನಿಯಲ್ಲಿ ಪ್ರತಿ ತಿಂಗಳು 15 ದಿನ ಸಮ-ಬೆಸ ಸಾರಿಗೆ ನಿಯಮ ಜಾರಿಗೊಳಿಸುವ ಬಗ್ಗೆ ದೆಹಲಿ ಸರ್ಕಾರ ಗಂಭೀರ ಚಿಂತನೆ ನಡೆಸಿದೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on
ನವದೆಹಲಿ: ರಾಷ್ಟ್ರರಾಜಧಾನಿಯಲ್ಲಿ ಪ್ರತಿ ತಿಂಗಳು 15 ದಿನ ಸಮ-ಬೆಸ ಸಾರಿಗೆ ನಿಯಮ ಜಾರಿಗೊಳಿಸುವ ಬಗ್ಗೆ ದೆಹಲಿ ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಶನಿವಾರ ಹೇಳಿದ್ದಾರೆ.
ಈ ಸಂಬಂಧ ಇಂದು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ದೆಹಲಿ ಸಿಎಂ, ಸಾರ್ವಜನಿಕ ಸಾರಿಗೆ ವ್ಯವಸ್ಥೆ ಸಮರ್ಪಕವಾಗುವವರೆಗೆ ತಿಂಗಳಲ್ಲಿ 15ದಿನ ಸಮ-ಬೆಸ ನಿಯಮ ಜಾರಿಗೆ ತರಲಾಗುವುದು ಎಂದರು.
ಏಪ್ರಿಲ್ 15ರಿಂದ ದೆಹಲಿಯಲ್ಲಿ ಮತ್ತೆ ಸಮ-ಬೆಸ ನಿಯಮ ಜಾರಿಗೆ ಬರುತ್ತಿದ್ದು, ಈ ಬಾರಿ ಶಾಲಾ ವಾಹನಗಳಿಗೆ ಹಾಗೂ ಮಹಿಳೆಯರಿಗೆ ವಿನಾಯ್ತಿ ನೀಡಲಾಗಿದೆ.
ಇದೇ ಸುದ್ದಿಗೋಷ್ಠಿಯಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಮೇಲೆ ವ್ಯಕ್ತಿಯೊಬ್ಬ ಏಕಾಏಕಿ ಶೂ ಎಸೆದ ಘಟನೆಯೂ ನಡೆಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com