ಕೇರಳ ದೇಗುಲ ಅಗ್ನಿ ದುರಂತ: ಸ್ಥಳಕ್ಕೆ ಭೇಟಿ ನೀಡಿದ ಸಿಎಂ ಚಾಂಡಿ

ಕೇರಳದ ಮೂಕಾಂಬಿಕ ದೇಗುಲದಲ್ಲಿ ಸಂಭವಿಸಿದ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಮುಖ್ಯಮಂತ್ರಿ ಉಮ್ಮನ್ ಚಾಂಡಿಯವರು...
ಕೇರಳ ಮುಖ್ಯಮಂತ್ರಿ ಉಮ್ಮನ್ ಚಾಂಡಿ
ಕೇರಳ ಮುಖ್ಯಮಂತ್ರಿ ಉಮ್ಮನ್ ಚಾಂಡಿ
Updated on

ತಿರುವನಂತಪುರಂ: ಕೇರಳದ ಮೂಕಾಂಬಿಕ ದೇಗುಲದಲ್ಲಿ ಸಂಭವಿಸಿದ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಮುಖ್ಯಮಂತ್ರಿ ಉಮ್ಮನ್ ಚಾಂಡಿಯವರು ಭಾನುವಾರ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ದುರ್ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ತಮ್ಮೆಲ್ಲಾ ಕಾರ್ಯಕ್ರಮಗಳನ್ನು ರದ್ದು ಮಾಡಿರುವ ಅವರು ಇದೀಗ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದಾರೆ.

ಘಟನೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ರಕ್ಷಣಾ ಕಾರ್ಯಾಚರಣೆ ಮುಕ್ತಾಯವಾಗಿದೆ. ಇದೀಗ ಸರ್ಕಾರದ ಗಮನವೇನಿದ್ದರೂ ಗಾಯಾಳುಗಳಿಗೆ ಉತ್ತಮ ರೀತಿಯಲ್ಲಿ ಚಿಕಿತ್ಸೆ ನೀಡುವುದು. ಸಾವಿನ ಸಂಖ್ಯೆ ಏರಿಕೆಯಾಗುತ್ತಿರುವುದಾಗಿ ತಿಳಿದುಬರುತ್ತಿದೆ. ಆದರೆ, ಗಾಯಾಳುಗಳಿಗೆ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆಕೊಡಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ಘಟನೆ ಈ ಹಿಂದೆಂದೂ ಸಂಭವಿಸಿರಲಿಲ್ಲ. ಇದೊಂದು ಹೊಸ ರೀತಿಯ ಘಟನೆಯಾಗಿದೆ. ಘಟನೆಯೊಂದು ಎಚ್ಚರಿಕೆ ಗಂಟೆಯಾಗಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com