ಚುನಾವಣಾ ಆಯೋಗದ ಅಧಿಕಾರಿಗಳ ವಿರುದ್ಧ ಪಕ್ಷಪಾತದ ಆರೋಪ ಮಾಡಿದ ತರುಣ್ ಗೊಗೊಯ್

ಅಸ್ಸಾಂ ಮುಖ್ಯಮಂತ್ರಿ ತರುಣ್ ಗೊಗೊಯ್ ಚುನಾವಣಾ ಆಯೋಗದ ವಿರುದ್ಧ ಪಕ್ಷಪಾತದ ಆರೋಪ ಮಾಡಿದ್ದಾರೆ.
ತರುಣ್ ಗೊಗೊಯ್
ತರುಣ್ ಗೊಗೊಯ್

ಗುವಾಹಟಿ: ಅಸ್ಸಾಂ ಮುಖ್ಯಮಂತ್ರಿ ತರುಣ್ ಗೊಗೊಯ್ ಚುನಾವಣಾ ಆಯೋಗದ ವಿರುದ್ಧ ಪಕ್ಷಪಾತದ ಆರೋಪ ಮಾಡಿದ್ದಾರೆ.
ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅಸ್ಸಾಂ ಮುಖ್ಯಮಂತ್ರಿ ತರುಣ್ ಗೊಗೊಯ್, ಚುನಾವಾಣಾ ಆಯೋಗದ ಅಧಿಕಾರಿಗಳು ಕಾಂಗ್ರೆಸ್ ನಾಯಕರಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಭಾನುವಾರ ಚುನಾವಣಾ ಆಯೋಗದ ಅಧಿಕಾರಿಗಳು ಕಾಂಗ್ರೆಸ್ ನಾಯಕ ಗೌತಮ್ ಬೋರಾ ಅವರ ನಿವಾಸವನ್ನು ಸುತ್ತುವರಿದ ಪ್ರಕರಣವನ್ನು ಉಲ್ಲೇಖಿಸಿ ತರುಣ್ ಗೊಗೊಯ್ ಈ ಆರೋಪ ಮಾಡಿದ್ದಾರೆ.
ಬಿಜೆಪಿ ನಾಯಕ ಹಿಮಂತ ಬಿಸ್ವ ಶರ್ಮ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದರೂ ಚುನಾವಣಾ ಆಯೋಗದ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ. ಆದರೆ ಕಾಂಗ್ರೆಸ್ ನಾಯಕರ ಮನೆ ಮೇಲೆ ಕಾರಣ ಇಲ್ಲದೇ ಆಯೋಗದ ಅಧಿಕಾರಿಗಳು ದಾಳಿ ನಡೆಸುತ್ತಿದ್ದಾರೆ ಎಂದು ಗೊಗೊಯ್ ಹೇಳಿದ್ದಾರೆ. 
ತರುಣ್ ಗೊಗೊಯ್ ಸುದ್ದಿಗೋಷ್ಠಿ ನಡೆಸಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಚುನಾವಣಾ ಅಧಿಕಾರಿಗಳು, ಚುನಾವಣೆ ನಡೆಯುತ್ತಿರಬೇಕಾದರೆ ಮುಖ್ಯಮಂತ್ರಿಗಳು ಸುದ್ದಿಗೋಷ್ಠಿ ನಡೆಸುವಂತಿಲ್ಲ ಎಂದಿದ್ದಾರೆ.  

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com