ಆನಂದಿ ಬೆನ್ ಪಟೇಲ್
ದೇಶ
ಅಂಬೇಡ್ಕರ್ ನಿಜವಾದ ದೇಶಭಕ್ತ: ಆನಂದಿಬೆನ್ ಪಟೇಲ್
ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಬೇಡ್ಕರ್ ಅವರು ಕೇವಲ ದಲಿತ ನಾಯಕರು ಮಾತ್ರವಲ್ಲ ನಿಜವಾದ ರಾಷ್ಟ್ರವಾದಿ ಎಂದು ಗುಜರಾತ್ ಮುಖ್ಯಮಂತ್ರಿ ...
ಅಹಮದಾಬಾದ್: ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಬೇಡ್ಕರ್ ಅವರು ಕೇವಲ ದಲಿತ ನಾಯಕರು ಮಾತ್ರವಲ್ಲ ನಿಜವಾದ ರಾಷ್ಟ್ರವಾದಿ ಎಂದು ಗುಜರಾತ್ ಮುಖ್ಯಮಂತ್ರಿ ಆನಂದಿಬೆನ್ ಪಟೇಲ್ ಅಭಿಪ್ರಾಯ ಪಟ್ಟಿದ್ದಾರೆ.
ಅಂಬೇಡ್ಕರ್ ಅವರನ್ನು ದಲಿತ ನಾಯಕರೆಂದು ಬಿಂಬಿಸಿ ಅಷ್ಟಕ್ಕೆ ಸೀಮಿತಗೊಳಿಸಬಾರದು. ಪ್ರತಿಯೊಬ್ಬರಿಗೆ ಸಮಾನವಾಗಿ ಬದುಕುವ ಅವಕಾಶ ಕಲ್ಪಿಸಿಕೊಟ್ಟ ಮಹಾನ್ ದೇಶಭಕ್ತ. ಅವರೊಬ್ಬ ಅಂತಾರಾಷ್ಟ್ರೀಯ ಮಟ್ಟದ ನಾಯಕ ಎಂದು ಹಾಡಿ ಹೊಗಳಿದ್ದಾರೆ.
ಡಾ. ಬಿ.ಆರ್ ಅಂಬೇಡ್ಕರ್ ಅವರ 125 ನೇ ಜನ್ಮ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅಂಬೇಡ್ಕರ್ ಹಾಕಿಕೊಟ್ಟ ಮಾರ್ಗದಲ್ಲಿ ನಡೆಯುವಂತೆ ಯುವಜನತೆಗೆ ಕರೆ ನೀಡಿದರು.
ಕೇವಲ ಶಿಕ್ಷಣದಿಂದ ಸಾಮಾಜಿಕ ಪಿಡುಗು ಹಾಗೂ ಮೂಢನಂಬಿಕೆಗಳನ್ನು ಹೋಗಲಾಡಿಸಲು ಸಾಧ್ಯವಿಲ್ಲ ಎಂದು ಹೇಳಿದರು.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ