6 ತಿಂಗಳ ಜೈಲು ವಾಸದ ನಂತರ ಕಾಂಗ್ರೆಸ್ ಶಾಸಕನಿಗೆ ಜಾಮೀನು

ವಾರಣಾಸಿಯಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಬಂಧನವಾಗಿ ಜೈಲು ಪಾಲಾಗಿದ್ದ ಕಾಂಗ್ರೆಸ್ ಶಾಸಕ ಅಜಯ್ ರೈಗೆ ಅಲಹಾಬಾದ್...
ಅಜಯ್ ರೈ
ಅಜಯ್ ರೈ
Updated on
ಅಲಹಾಬಾದ್: ವಾರಣಾಸಿಯಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಬಂಧನವಾಗಿ ಜೈಲು ಪಾಲಾಗಿದ್ದ ಕಾಂಗ್ರೆಸ್ ಶಾಸಕ ಅಜಯ್ ರೈಗೆ ಅಲಹಾಬಾದ್ ಹೈಕೋರ್ಟ್ ಜಾಮೀನು ನೀಡಿದೆ. 
ನ್ಯಾಯಾಮೂರ್ತಿ ರಾಜೇಶ್ ದಯಾಳ್ ಕೇಹ್ರೆ ಅವರು ಅಜಯ್ ರೈ ಅವರಿಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದ್ದಾರೆ. ಯಾವುದೇ ಸಾಕ್ಷಿಗಳನ್ನು ನಾಶಪಡಿಸಿದಂತೆ ತಿಳಿಸಿದ್ದು, ಷರತ್ತುಗಳನ್ನು ಉಲ್ಲಂಘಿಸಿದರೆ ಜಾಮೀನು ರದ್ದಾಗುವುದು ಎಂದು ನ್ಯಾಯಾಲಯ ಎಚ್ಚರಿಸಿದೆ. 
ಅಕ್ಟೋಬರ್ 7ರಂದು ಹಿಂದೂ ಧಾರ್ಮಿಕ ಮುಖಂಡರ ಮೇಲೆ ಲಾಠಿ ಚಾರ್ಜ್ ಮಾಡಿದ ಪೊಲೀಸರ ವಿರುದ್ಧ ಅಜಯ್ ರೈ ಸೇರಿದಂತೆ ಹಲವರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಅಜಯ್ ರೈ ಅವರನ್ನು ಬಂಧಿಸಿದ ಪೊಲೀಸರು ಪ್ರಕರಣ ದಾಖಲಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com