ಈ ವೇಳೆ ಮಾತನಾಡಿದ ವಿಜಯ್ ಗೋಯಲ್ ನಾನು ಸಮ-ಬೆಸ ಯೋಜನೆಯನ್ನು ವಿರೋಧಿಸುತ್ತಿಲ್ಲ, ಆದರೆ ಈ ಯೋಜನೆಯನ್ನು ಆಪ್ ಪಕ್ಷ ಮತ್ತು ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ರಾಜಕೀಯ ಲಾಭಕ್ಕಾಗಿ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಇದನ್ನು ನಾನು ವಿರೋಧಿಸುತ್ತಿದ್ದೇನೆ. ಜತೆಗೆ ನಿಯಮ ಉಲ್ಲಂಘಿಸಿದವರಿಗೆ 2000 ರೂ. ದಂಡ ವಿಧಿಸಲಾಗುತ್ತಿದ್ದು, ದಂಡದ ಪ್ರಮಾಣವನ್ನು ಇಳಿಕೆ ಮಾಡಬೇಕು. ಈ ನಿಯಮ ಜನತೆಯನ್ನು 2 ಕಾರು ಹೊಂದುವಂತೆ ಪ್ರೇರೇಪಿಸುತ್ತಿದೆ ಎಂದು ತಿಳಿಸಿದರು.