ನವದೆಹಲಿ: ದೇಶದಲ್ಲಿ ಎದುರಾಗಿರುವ ಬರ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಲು ಕೇಂದ್ರ ಸರ್ಕಾರ ಸಿದ್ಧವಿದ್ದು, ಇಂತಹ ಸಂದರ್ಭಗಳನ್ನು ಎದುರಿಸಲು ಆರ್ಥಿಕತೆಯಲ್ಲಿ ಸ್ಥಿತಿಸ್ಥಾಪಕತ್ವ ರಚನೆಗೆ ತಯಾರಿ ನಡೆಸುತ್ತಿದೆ ಎಂದು ಕೇಂದ್ರ ಪರಿಸರ ಖಾತೆ ಸಚಿವ ಪ್ರಕಾಶ್ ಜವಡೇಕರ್ ಅವರು ಬುಧವಾರ ಹೇಳಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಅವರು, ಪ್ರಸ್ತುತ ದೇಶದಲ್ಲಿ ಸಂಭವಿಸಿರುವ ಬರಗಾಲ ಪರಿಸ್ಥಿತಿ ಭೀಕರವಾಗಿದ್ದು, ದೇಶದ ಶೇ.25 ರಷ್ಟು ಜನರ ಮೇಲೆ ಪರಿಣಾಮ ಬೀರಿದೆ. ನೈಸರ್ಗಿಕ ವಿಪತ್ತಿನಿಂದಾಗಿ ಎರಡು ವರ್ಷಗಳಿಂದ ಸತತವಾಗಿ ಬರಗಾಲ ಸಂಭವಿಸಿದೆ. ಜಾಗತಿಕ ಎಚ್ಚರಿಕೆ ಮತ್ತು ಹವಾಮಾನ ಬದಲಾವಣೆ ಬರಗಾಲಕ್ಕೆ ಪ್ರಮುಖ ಕಾರಣವಾಗಿದೆ ಎಂದು ಹೇಳಿದ್ದಾರೆ.
ಕೇಂದ್ರ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಬರ ಪೀಡಿತ ರಾಜ್ಯಗಳಿಗೆ ಪರಿಹಾರ ನೀಡುವುದರೊಂದಿಗೆ ಈ ಸಮಸ್ಯೆ ಎದುರಿಸಲು ಶಾಶ್ವತ ಪರಿಹಾರ ನೀಡಲು ಚಿಂತನೆ ನಡೆಸಿದೆ. ಅಲ್ಲದೆ, ಇಂತಹ ಸಂದರ್ಭಗಳನ್ನು ಎದುರಿಸಲು ಆರ್ಥಿಕತೆಯಲ್ಲಿ ಸ್ಥಿತಿಸ್ಥಾಪಕತ್ವ ರಚನೆಗೆ ತಯಾರಿ ನಡೆಸುತ್ತಿದೆ ಎಂದು ಹೇಳಿದ್ದಾರೆ.
Advertisement