ಬ್ರಿಟಿಷ್ ಸರ್ಕಾರ ಕೊಹಿನ್ನೂರ್ ವಜ್ರವನ್ನು ಬಲವಂತವಾಗಿ ತೆಗೆದುಕೊಂಡು ಹೋಗಿಲ್ಲ, ಪಂಜಾಬ್ ನ ಮಹಾರಾಜ ರಂಜಿತ್ ಸಿಂಗ್ ಅವರ ಪುತ್ರ ಮಹಾರಾಜ ದುಲೀಪ್ ಸಿಂಗ್ ಅವರು ಕೊಹಿನ್ನೂರ್ ವಜ್ರವನ್ನು ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿಗೆ ಉಡುಗೊರೆಯಾಗಿ ನೀಡಿದ್ದರು ಎಂದು ಸಾಲಿಸಿಟರ್ ಜನರಲ್ ರಂಜಿತ್ ಕುಮಾರ್ ಸುಪ್ರೀಂ ಕೋರ್ಟ್ಗೆ ಹೇಳಿದ ಬೆನ್ನಲ್ಲೇ ಸರ್ಕಾರ ಈ ರೀತಿ ಪ್ರತಿಕ್ರಿಯೆ ನೀಡಿತ್ತು.