ಮುಸ್ಲೀಮರು ಎರಡು ಮಕ್ಕಳನ್ನಷ್ಟೇ ಹೆತ್ತರೆ ನಮ್ಮ ಹೆಣ್ಮಕ್ಕಳು ಸುರಕ್ಷಿತ: ಗಿರಿರಾಜ್ ಸಿಂಗ್

ದೇಶದಲ್ಲಿ ಹೆಚ್ಚುತ್ತಿರುವ ಜನಸಂಖ್ಯೆಯನ್ನು ನಿಯಂತ್ರಿಸಲು ಎಲ್ಲಾ ಧರ್ಮದ ಜನರು ಕೇವಲ ಎರಡು ಮಕ್ಕಳನ್ನಷ್ಟೇ ಮಾಡಿಕೊಳ್ಳಬೇಕು ಎಂಬ ಆದೇಶಾಜ್ಞೆ ಹೊರಡಿಸಬೇಕು ಎಂದು ..
ಗಿರಿರಾಜ್ ಸಿಂಗ್
ಗಿರಿರಾಜ್ ಸಿಂಗ್

ನವದೆಹಲಿ: ದೇಶದಲ್ಲಿ ಹೆಚ್ಚುತ್ತಿರುವ ಜನಸಂಖ್ಯೆಯನ್ನು ನಿಯಂತ್ರಿಸಲು ಎಲ್ಲಾ ಧರ್ಮದ ಜನರು ಕೇವಲ ಎರಡು ಮಕ್ಕಳನ್ನಷ್ಟೇ  ಮಾಡಿಕೊಳ್ಳಬೇಕು ಎಂಬ ಆದೇಶಾಜ್ಞೆ ಹೊರಡಿಸಬೇಕು ಎಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಹೇಳಿದ್ದಾರೆ.

ಜನಸಂಖ್ಯೆಯನ್ನು ನಿಯಂತ್ರಿಸಲು ಕಠಿಣ ಕ್ರಮ ಜಾರಿಗೆ ತರಬೇಕು, ಇಲ್ಲವಾದರೇ ನಮ್ಮ ಹೆಣ್ಣು ಮಕ್ಕಳಿಗೆ ರಕ್ಷಣೆ ಇರುವುದಿಲ್ಲ. ಸರ್ಕಾರ ಇಂಥ ಕಠಿಣ ನೀತಿಯನ್ನು ಜಾರಿಗೆ ತರಲು ವಿಫಲವಾದಲ್ಲಿ  ಪಾಕಿಸ್ತಾನದಂತೆ ನಮ್ಮ ಹೆಣ್ಣು ಮಕ್ಕಳನ್ನು ಪರದೆ ಅಡಿಯಲ್ಲಿ ಇಡಬೇಕಾಗುತ್ತದೆ ಎಂದು ಹೇಳಿದ್ದಾರೆ.

ಬಿಹಾರದ ಪಶ್ಚಿಮ ಚಂಪಾರಣ್ ನಲ್ಲಿ  ಮಾತನಾಡಿದ  ನಾವಡ ಬಿಜೆಪಿ ಸಂಸದ ಗಿರಿರಾಜ್ ಸಿಂಗ್ ಹಿಂದೂಗಳಿಗಿಂತ ಮುಸಲ್ಮಾನರ ಜನ ಸಂಖ್ಯೆಯಲ್ಲಿ ಹೆಚ್ಚಾಗುತ್ತಿರುವುದಕ್ಕೆ ಕಳವಳ ವ್ಯಕ್ತ ಪಡಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com