ಕನ್ಹಯ್ಯಾ ಮೇಲೆ ಮತ್ತೆ ಹಲ್ಲೆ: ಬಿಜೆಪಿ ಬೆಂಬಲಿಗನ ವಿರುದ್ಧ ಎಫ್ಐಆರ್ ದಾಖಲು

ದೇಶದ್ರೋಹ ಆರೋಪ ಎದುರಿಸುತ್ತಿರುವ ಜೆಎನ್ ಯು ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯ ಕುಮಾರ್ ಮೇಲೆ ಮತ್ತೊಮ್ಮೆ ಹಲ್ಲೆ ಪ್ರಯತ್ನ ನಡೆದಿದ್ದು, ಬಿಜೆಪಿ ಪಕ್ಷದ ಬೆಂಬಲಿಗನೊಬ್ಬನ ವಿರುದ್ದ...
ಜೆಎನ್ ಯು ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯ ಕುಮಾರ್
ಜೆಎನ್ ಯು ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯ ಕುಮಾರ್

ಮುಂಬೈ: ದೇಶದ್ರೋಹ ಆರೋಪ ಎದುರಿಸುತ್ತಿರುವ ಜೆಎನ್ ಯು ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯ ಕುಮಾರ್ ಮೇಲೆ ಮತ್ತೊಮ್ಮೆ ಹಲ್ಲೆ ಪ್ರಯತ್ನ ನಡೆದಿದ್ದು, ಬಿಜೆಪಿ ಪಕ್ಷದ ಬೆಂಬಲಿಗನೊಬ್ಬನ ವಿರುದ್ದ ಎಫ್ಐಆರ್ ದಾಖಲು ಮಾಡಲಾಗಿದೆ ಎಂದು ಭಾನುವಾರ ತಿಳಿದುಬಂದಿದೆ.

ಮುಂಬೈನ ಜೆಟ್ ಏರ್ ವೇಸ್ ನಲ್ಲಿ ಪ್ರಯಾಣಿಕನೋರ್ವ ತನ್ನ ಮೇಲೆ ಹಲ್ಲೆ ಮಾಡಿದ್ದಾನೆಂದು ಕನ್ಹಯ್ಯ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿದ್ದರು.

ಮುಂಬೈ ಏರ್ ಪೋರ್ಟ್ ನಿಂದ ಜೆಟ್ ಏರ್ ವೇಸ್ ನಲ್ಲಿ ಪುಣೆಗೆ ತೆರಳುತ್ತಿದ್ದೆ. ಈ ವೇಳೆ ಸ್ಥಳದಲ್ಲಿ ಪ್ರಯಾಣಿಕನೋರ್ವ ನನ್ನು ಕುತ್ತಿಗೆ ಹಿಸುಕಿ ಹಲ್ಲೆ ಮಾಡಲು ಯತ್ನಿಸಿದ. ಘಟನೆ ಸಂಬಂಧ ಜೆಟ್ ಏರ್ ವೇಸ್ ಅಧಿಕಾರಿಗಳಿಗೆ ಮಾಹಿತಿ ನೀಡಿದರೂ ಯಾವುದೇ ಕ್ರಮಕ್ಕೆ ಮುಂದಾಗಲಿಲ್ಲ. ಕ್ರಮ ಕೈಗೊಳ್ಳುವ ಬದಲು ಆತನನ್ನು ವಿಮಾನದಿಂದ ಇಳಿಸಿದರು ಎಂದು ಕನ್ಹಯ್ಯಾ ಹೇಳಿಕೊಂಡಿದ್ದಾರೆ.

ಕನ್ಹಯ್ಯ ಅವರ ಈ ಹೇಳಿಕೆ ಸಂಬಂಧ ಕ್ರಮ ಕೈಗೊಂಡಿರುವ ಅಲ್ಲಿನ ಪೊಲೀಸರು ಇದೀ ಬಿಜೆಪಿ ಬೆಂಬಲಿಗನೊಬ್ಬನ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com