ಲಖನೌ: ಉತ್ತರ ಪ್ರದೇಶದ ಆಜಂಘರ್ ನಲ್ಲಿ ಸಾರ್ವಜನಿಕ ಸಮಾವೇಶ ನಡೆಸಲು ಅನುಮತಿ ನಿರಾಕರಿಸಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಎಂಐಎಂ ಪಕ್ಷದ ಮುಖಂಡ ಮುಖಂಡ ಅಸಾವುದ್ದೀನ್ ಒವೈಸಿ, ಸಮಾಜವಾದಿ ಪಕ್ಷಕ್ಕೆ ಅಭದ್ರತೆ ಕಾಡುತ್ತಿದೆ ಎಂದು ಟೀಕೆ ಮಾಡಿದ್ದಾರೆ.
ಏ.23 ರಂದು ಉತ್ತರಪ್ರದೇಶದ 4 ಜಿಲ್ಲೆಗಳಲ್ಲಿ ಸಾರ್ವಜನಿಕ ಸಭೆಗಳನ್ನು ನಡೆಸಿದ ಪ್ರಮುಖವಾಗಿ ಯುವಕತಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿತು. ಆದರೆ ಆಜಂಘರ್ ನಲ್ಲಿ ಮಾತ್ರ ಸಾರ್ವಜನಿಕ ಸಮಾವೇಶ ನಡೆಸಲು ಅನುಮತಿ ನಿರಾಕರಿಸಲಾಯಿತು ಸಮಾಜವಾದಿ ಪಕ್ಷಕ್ಕೆ ಅಭದ್ರತೆ ಕಾಡುತ್ತಿದೆ ಎಂದು ಅಸಾವುದ್ದೀನ್ ಒವೈಸಿ ಟ್ವಿಟರ್ ನಲ್ಲಿ ಬರೆದಿದ್ದಾರೆ.
ಮುಬಾರಕ್ ಪುರದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದ ಹಿನ್ನೆಲೆಯಲ್ಲಿ ಆಜಂಘರ್ ಜಿಲ್ಲೆಯಲ್ಲಿ ಸಾರ್ವಜನಿಕ ಸಭೆ ನಡೆಸಲು ಅಸಾವುದ್ದೀನ್ ಒವೈಸಿಗೆ ಅನುಮತಿ ನಿರಾಕರಿಸಲಾಗಿತ್ತು. ಅನುಮತಿ ನಿರಾಕರಿಸಿದ್ದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಒವೈಸಿ, ಅಖಿಲೇಶ್ ಯಾದವ್ ಅವರೇನು ಅತಿಮಾನುಷ ಶಕ್ತಿಯಲ್ಲ, ಆಜಂಘರ್ ಗೆ ಬಂದೇ ಬರುತ್ತೇನೆ ಎಂದು ಅಸಾವುದ್ದೀನ್ ಒವೈಸಿ ತಿಳಿಸಿದ್ದಾರೆ.
Advertisement