ಪ್ರಜಾಪ್ರಭುತ್ವದ ಪ್ರಸ್ತುತತೆಯನ್ನೇ ಬಿಜೆಪಿ ಪ್ರಶ್ನಿಸುತ್ತಿದೆ: ಕಾಂಗ್ರೆಸ್ ಟೀಕೆ

ಉತ್ತರಾಖಂಡ್ ನಲ್ಲಿ ಹೇರಲಾಗಿರುವ ರಾಷ್ಟ್ರಪತಿ ಆಡಳಿತದ ವಿರುದ್ಧ ಬಿಜೆಪಿ ಹಾಗೂ ಕೇಂದ್ರದ ಆಡಳಿತರೂಢ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಿಡಿಕಾರಿದ್ದು, ಪ್ರಜಾಪ್ರಭುತ್ವದ ಪ್ರಸ್ತುತತೆಯನ್ನೇ...
ಕಾಂಗ್ರೆಸ್ ನಾಯಕ ರಾಜೀವ್ ಶುಕ್ಲಾ (ಸಂಗ್ರಹ ಚಿತ್ರ)
ಕಾಂಗ್ರೆಸ್ ನಾಯಕ ರಾಜೀವ್ ಶುಕ್ಲಾ (ಸಂಗ್ರಹ ಚಿತ್ರ)
Updated on

ನವದೆಹಲಿ: ಉತ್ತರಾಖಂಡ್ ನಲ್ಲಿ ಹೇರಲಾಗಿರುವ ರಾಷ್ಟ್ರಪತಿ ಆಡಳಿತದ ವಿರುದ್ಧ ಬಿಜೆಪಿ ಹಾಗೂ ಕೇಂದ್ರದ ಆಡಳಿತರೂಢ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಿಡಿಕಾರಿದ್ದು, ಪ್ರಜಾಪ್ರಭುತ್ವದ ಪ್ರಸ್ತುತತೆಯನ್ನೇ ಬಿಜೆಪಿ ಪ್ರಶ್ನಿಸುತ್ತಿದೆ ಎಂದು ಸೋಮವಾರ ಹೇಳಿದೆ.

ಈ ಕುರಿತಂತೆ ಮಾತನಾಡಿರುವ ಕಾಂಗ್ರೆಸ್ ನಾಯಕ ರಾಜೀವ್ ಶುಕ್ಲಾ ಅವರು, ಉತ್ತರಾಖಂಡ್ ನಲ್ಲಿ ಹೇರಲಾಗಿರುವ ರಾಷ್ಟ್ರಪತಿ ಆಡಳಿತ ಅತ್ಯಂತ ಮುಖ್ಯವಾದ ವಿಚಾರ. ಈ ವಿಚಾರವನ್ನು ಚರ್ಚೆ ಮಾಡಲೇಬೇಕಿದೆ. ವಿಷಯ ನ್ಯಾಯಾಲಯಲದಲ್ಲಿದೆ ಎಂದು ಹೇಳಿದೆ ಬಿಜೆಪಿ ಇದರಿಂದ ನುಣುಚಿಕೊಳ್ಳಲು ಬಿಡುವುದಿಲ್ಲ ಎಂದು ಹೇಳಿದ್ದಾರೆ.

ಉತ್ತರಾಖಂಡ್ ವಿಚಾರ ಪ್ರಜಾಪ್ರಭುತ್ವದ ಪ್ರಸ್ತುತತೆ ವಿಚಾರವಾಗಿದ್ದು, ಪ್ರಜಾಪ್ರಭುತ್ವದ ಪ್ರಸ್ತುತತೆಯನ್ನೇ ಬಿಜೆಪಿ ಪ್ರಶ್ನಿಸುತ್ತಿದೆ. ಒಂದು ವೇಳೆ ಬಿಜೆಪಿ ಪ್ರತಿಪಕ್ಷ ಸ್ಥಾನದಲ್ಲಿದ್ದರೆ. ಈ ವಿಚಾರವನ್ನು ಬಿಡುತ್ತಿರಲಿಲ್ಲ. ನ್ಯಾಯಾಲಯದಲ್ಲಿದ್ದರೂ ವಿಚಾರವನ್ನು ಚರ್ಚೆಗೆ ತರುತ್ತಿತ್ತು. ಹಾಗೆಯೇ ನಾವು ವಿಚಾರವನ್ನು ಬಿಡುವುದಿಲ್ಲ ಎಂದು ಹೇಳಿದ್ದಾರೆ.

ಈ ಹಿಂದೆ ಉತ್ತರಾಖಂಡ್ ಬಿಕ್ಕಟ್ಟು ವಿಚಾರ ಕುರಿತಂತೆ ಹೇಳಿಕೆ ನೀಡಿದ್ದ ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಅವರು, ಉತ್ತರಾಖಂಡ್ ವಿಚಾರವನ್ನು ಸಂಸತ್ತಿನಲ್ಲಿ ಚರ್ಚೆ ನಡೆಸಲು ಸರ್ಕಾರ ಸಿದ್ಧವಿದೆ. ಆದರೆ, ಪ್ರಸ್ತುತ ಈ ವಿಚಾರ ಸುಪ್ರೀಂಕೋರ್ಟ್ ಅಂಗಳದಲ್ಲಿದ್ದು, ವಿಚಾರ ಸಂಬಂಧ ಚರ್ಚೆ ನಡೆಸಲು ಸಾಧ್ಯವಾಗುವಿಲ್ಲ ಎಂದು ಹೇಳಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com