ವಾರಣಾಸಿ: ಪಾಕಿಸ್ತಾನಿ ಘಜಲ್ ಗಾಯಕ ಗುಲಾಂ ಅಲಿ ಅವರು ವಾರಣಾಸಿಯ ಸಂಕಟ್ ಮೋಚನ್ ಹನುಮಾನ್ ದೇಗುಲದಲ್ಲಿ ನಡೆಸಿಕೊಡಲಿರುವ ಸಂಗೀತ ಕಚೇರಿಗೆ ಶಿವ ಸೈನಿಕ್ ಸಂಘಟನೆ ವಿರೋಧ ವ್ಯಕ್ತಪಡಿಸಿದ್ದು, ಗುಲಾಂ ಅಲಿ ಅವರ ಭಾವಚಿತ್ರವನ್ನು ಸುಟ್ಟು ಸೋಮವಾರ ಪ್ರತಿಭಟನೆ ನಡೆಸುತ್ತಿದೆ.
ಗುಲಾಂ ಅಲಿ ಅವರು ನಾಳೆ ಸಂಗೀತ ಕಚೇರಿಯನ್ನು ನಡೆಸಿಕೊಡಲಿದ್ದು, ಇಂದು ರಾತ್ರಿ 8 ಗಂಟೆಗೆ ವಾರಣಾಸಿಗೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಶಿವ ಸೈನಿಕ್ ಸಂಘಟನೆ ವಿರೋಧ ವ್ಯಕ್ತಪಡಿಸಿದ್ದು, ಹಲವೆಡೆ ಪ್ರತಿಭಟನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.
ಈ ಹಿಂದೆ ಸಂಗೀತ ಕಚೇರಿ ನಡೆಸಿಕೊಡುವಂತೆ ಸ್ವತಃ ದೇಗುಲದ ಆಡಳಿತ ಮಂಡಳಿಯವರೇ ಗುಲಾಂ ಅಲಿ ಅವರನ್ನು ಸಂಪರ್ಕಿಸಿದ್ದು, ಸಂಗೀತ ಕಚೇರಿ ನಡೆಸಿಕೊಂಡುವಂತೆ ಮನವಿ ಮಾಡಿಕೊಂಡಿದ್ದರು. ಇದರಂತೆ ಕಚೇರಿ ನಡೆಸಿಕೊಡಲು ಗುಲಾಂ ನಬಿ ಅವರು ಒಪ್ಪಿಕೊಂಡಿದ್ದರು. ಆದರೆ, ಇದಕ್ಕೆ ಹಲವು ಹಿಂದೂ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದವು.
Advertisement