ಇಂದು ರಾಜ್ಯಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ್ದ ಬಿಜೆಪಿಯ ಸುಬ್ರಮಣಿಯನ್ ಸ್ವಾಮಿ ಅವರು, ವಿವಿಐಪಿ ಹೆಲಿಕಾಪ್ಟರ್ ಹಗರಣದಲ್ಲಿ ಸೋನಿಯಾ ಗಾಂಧಿ ಶಾಮೀಲಾಗಿದ್ದಾರೆ ಎಂದು ಆರೋಪಿಸಿದ್ದರು. ಇದಕ್ಕೆ ತಿರುಗೇಟು ನೀಡಿದ್ದ ಸೋನಿಯಾ, ಆಗಸ್ಟಾ ವೆಸ್ಟ್ ಲ್ಯಾಂಡ್ ಖರೀದಿ ಹಗರಣದ ಕುರಿತಂತೆ ಕಳೆದ 2 ವರ್ಷಗಳಿಂದ ಅಧಿಕಾರದಲ್ಲಿರುವ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಏನು ಮಾಡಿದೆ ಎಂದು ಪ್ರಶ್ನಿಸಿದ್ದರು. ಅಲ್ಲದೇ ತನಿಖೆಯನ್ನು ಕೂಡಲೇ ನಿಷ್ಪಕ್ಷಪಾತವಾಗಿ ಪೂರ್ಣಗೊಳಿಸುವಂತೆ ಒತ್ತಾಯಿಸಿದ್ದರು.