ಹಗರಣ ಸಂಬಂಧ ಇಟಲಿ ನ್ಯಾಯಾಲಯ ತೀರ್ಪು ನೀಡಿದ ಬಳಿಕ ಇದೇ ಮೊದಲ ಬಾರಿಗೆ ತ್ಯಾಗಿ ಅವರು ಸಿಬಿಐನಿಂದ ತನಿಖೆ ಎದುರಿಸುತ್ತಿದ್ದಾರೆ. ಇಟಲಿ ನ್ಯಾಯಾಲಯದ ತೀರ್ಪಿನಲ್ಲಿ ತ್ಯಾಗಿ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ ಸೇರಿದಂತೆ ಘಾಟಾನುಘಟಿ ನಾಯಕ ಹೆಸರುಗಳು ಉಲ್ಲೇಖವಾಗಿದೆ ಎಂಬ ವರದಿಗಳು ಪ್ರಸಾರವಾದ ಹಿನ್ನಲೆಯಲ್ಲಿ ತ್ಯಾಗಿ ಅವರ ಸಿಬಿಐ ವಿಚಾರಣೆ ತೀವ್ರ ಕುತೂಹಲ ಕೆರಳಿಸಿದೆ.