ದೆಹಲಿಗೆ ರಾಜ್ಯದ ಸ್ಥಾನಮಾನ ನೀಡುವ ಮಸೂದೆಯ ಕರಡು ಸಿದ್ಧ: ಕೇಜ್ರಿವಾಲ್

ದೆಹಲಿಗೆ ರಾಜ್ಯದ ಸ್ಥಾನಮಾನ ನೀಡುವ ಮಸೂದೆಯ ಕರಡು ಸಿದ್ಧವಾಗಿದೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.
ಅರವಿಂದ್ ಕೇಜ್ರಿವಾಲ್
ಅರವಿಂದ್ ಕೇಜ್ರಿವಾಲ್

ನವದೆಹಲಿ: ದೆಹಲಿಗೆ ರಾಜ್ಯದ ಸ್ಥಾನಮಾನ ನೀಡುವ ಮಸೂದೆಯ ಕರಡು ಸಿದ್ಧವಾಗಿದೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.
ಕರಡು ಮಸೂದೆ ಸಿದ್ಧಗೊಂಡಿದ್ದು ಈ ಬಗ್ಗೆ ಸಾರ್ವಜನಿಕ ಅಭಿಪ್ರಾಯ ಸಂಗ್ರಹಣೆ ಮಾಡಲಾಗುವುದು ಎಂದು ಕೇಜ್ರಿವಾಲ್ ಟ್ವಿಟರ್ ಮೂಲಕ ತಿಳಿಸಿದ್ದಾರೆ. ದೆಹಲಿಗೆ ಸಂಪೂರ್ಣ ರಾಜ್ಯದ ಸ್ಥಾನಮಾನ ನೀಡಬೇಕೆಂಬುದು ಅರವಿಂದ್ ಕೇಜ್ರಿವಾಲ್ ಅವರ ಬಹುದಿನಗಳ ಒತ್ತಾಯವಾಗಿದೆ.
ದೆಹಲಿಗೆ ರಾಜ್ಯದ ಸ್ಥಾನಮಾನ ಸಿಗದೇ ಇರುವುದು ಅಭಿವೃದ್ಧಿ ವಿಷಯಗಳು ಹಾಗೂ ತಮ್ಮ ಯೋಜನೆಗಳನ್ನು ಜಾರಿಗೆ ತರುವುದಕ್ಕೆ ಅಡ್ಡಿ ಉಂಟಾಗುತ್ತಿದೆ ಎಂದು ಕೇಜ್ರಿವಾಲ್ ಆರೋಪಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com