2006ರ ಮೇ 8ರಂದು ಮಹಾರಾಷ್ಟ್ರ ಎಟಿಎಸ್ ಔರಂಗಬಾದ್ ನ ಚಂದ್ ವಾಡ್-ಮನ್ಮಾದ್ ಹೆದ್ದಾರಿಯಲ್ಲಿ ಕಾರನ್ನು ಬೆನ್ನಟ್ಟಿ ಮೂವರು ಶಂಕಿತ ಉಗ್ರರನ್ನು ಬಂಧಿಸಿ ಅವರಿಂದ 30 ಕೆಜಿ ಆರ್ಡಿಎಕ್ಸ್, 10 ಎಕೆ-47, 3,200 ಬುಲೆಟ್ ವಶಪಡಿಸಿಕೊಂಡಿತ್ತು. ಈ ವೇಳೆ ಜುಂದಾಲ್ ತಪ್ಪಿಸಿಕೊಂಡು ಬಾಂಗ್ಲಾದೇಶಕ್ಕೆ ಪಲಾಯನ ಮಾಡಿ, ನಂತರ ಪಾಕಿಸ್ತಾನಕ್ಕೆ ತೆರಳಿದ್ದ.